<p><strong>ದೇವನಹಳ್ಳಿ: </strong>ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಜೋಡಿಗ್ರಾಮಗಳಲ್ಲಿ ಸರ್ಕಾರಿ ಗೋಮಾಳ ಹಾಗೂ ಗ್ರಾಮಠಾಣಾ ಪ್ರದೇಶಗಳ ಒತ್ತುವರಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಭೂ ಹಗರಣವಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣ ರೆಡ್ಡಿ ಆರೋಪಿಸಿದರು.</p>.<p>ತಾಲ್ಲೂಕಿನ ಯರ್ತಿಗಾನಹಳ್ಳಿ ಮೂಲಕ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರದೇಶದಲ್ಲಿ ಶನಿವಾರ ಕೆಆರ್ಎಸ್ ಪಕ್ಷ, ವಿವಿಧ ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಹೋರಾಟಗಾರರು ಹಮ್ಮಿಕೊಂಡಿದ್ದ ‘ಒತ್ತುವರಿ ತೆರವು ಜಾಥಾ’ದಲ್ಲಿ ಮಾತನಾಡಿದರು.</p>.<p>ಬಡವರು, ದೀನ ದಲಿತರಿಗೆ ಸೇರಬೇಕಾದ ಅಂದಾಜು 800 ಎಕರೆ ಸರ್ಕಾರಿ ಭೂಮಿಯನ್ನು ಪ್ರಭಾವಿ ರಾಜಕೀಯ ಕುಟುಂಬಗಳು ಹಾಗೂ ಶ್ರೀಮಂತರು ಕಬಳಿಸಿರುವ ಗಂಭೀರ ಆರೋಪವಿದೆ. ಕೆರೆ, ಕಾಲುವೆ, ರಾಜಕಾಲುವೆ, ಗೋಮಾಳ ಮತ್ತು ಗ್ರಾಮಠಾಣಾ ಪ್ರದೇಶಗಳನ್ನು ಅತಿಕ್ರಮಿಸಿ ಮಣ್ಣು ತುಂಬಲಾಗಿದೆ ಎಂದು ದೂರಿದರು.</p>.<p>ಇನಾಂ ರದ್ದು ಕಾಯ್ದೆ ರಾಜ್ಯದ ಇತರ ಭಾಗಗಳಲ್ಲಿ ಜಾರಿಯಾಗಿದ್ದರೂ, ಈ ಗ್ರಾಮಗಳಿಗೆ ಮಾತ್ರ ಅನ್ವಯವಾಗದೇ ಇರುವುದರಿಂದ ಸಂಶಯಗಳು ಹೆಚ್ಚುತ್ತಿವೆ. ರೈತರ ಹೆಸರಿನಲ್ಲಿದ್ದ ದಾಖಲೆಗಳು ಕಚೇರಿಗಳಲ್ಲಿ ಕಾಣೆಯಾಗಿದ್ದು, ಖರಾಬು ಜಾಗಗಳಲ್ಲಿ ಗ್ರಾಮವನ್ನು ವ್ಯವಸ್ಥಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಅಪಾದಿಸಿದರು.</p>.<p>ಜಾಥಾದಲ್ಲಿ ಭಾಗವಹಿಸಿದ ಹೋರಾಟಗಾರರು ಮತ್ತು ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸ್ಥಳಕ್ಕೆ ತೆರಳಿ, ಭೂಮಿಯ ಅಳತೆ ಪರಿಶೀಲನೆ ನಡೆಸಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಸಂಕೇತಿಕವಾಗಿ ನಡೆಸಿದರು. ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ ಹಾಗೂ ಕೋಲಾರ ಭಾಗಗಳಿಂದ ಜನರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ನಂತರ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಸಭೆ ನಡೆಸಿ, ಭೂ ಹಗರಣದಿಂದ ಉಂಟಾದ ಸಮಸ್ಯೆಗಳು ಹಾಗೂ ಇತ್ತೀಚೆಗೆ ರಾಜ್ಯ ಸಚಿವ ಸಂಪುಟದಲ್ಲಿ ಈ ವಿಷಯವಾಗಿ ಕೈಗೊಂಡ ಚರ್ಚೆಗಳ ಕುರಿತು ಗ್ರಾಮಸ್ಥರಿಗೆ ವಿವರ ನೀಡಲಾಯಿತು. ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿಖಿಲ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ಸರ್ವೆ ಪೂರ್ಣ , ಹಸ್ತಾಂತರ ಬಾಕಿ</p><p>ಸ್ಥಳಕ್ಕೆ ಆಗಮಿಸಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಕೆಆರ್ಎಸ್ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ ಕೆರೆ ಕೋಡಿ ರಾಜಕಾಲುವೆ ಗುಂಡು ತೋಪು ಸೇರಿದಂತೆ ಸರ್ಕಾರಿ ಜಮೀನುಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು. ಅವುಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವುದಷ್ಟೇ ಬಾಕಿಯಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿಂದಿನ ದಿನಗಳಲ್ಲಿ ಒತ್ತುವರಿ ತೆರವುಗೊಳಿಸಿ ಹಾಕಿದ್ದ ನಾಮಫಲಕವನ್ನು ಯಾರು ತೆಗೆದುಹಾಕಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿತು. ಕಂದಾಯ ಇಲಾಖೆ ಸ್ಥಳವನ್ನು ಗುರುತಿಸಿ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರೆ ಅದರ ನಿರ್ವಹಣೆ ಕೈಗೊಳ್ಳುವುದಾಗಿ ಪಿಡಿಒ ಗಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಜೋಡಿಗ್ರಾಮಗಳಲ್ಲಿ ಸರ್ಕಾರಿ ಗೋಮಾಳ ಹಾಗೂ ಗ್ರಾಮಠಾಣಾ ಪ್ರದೇಶಗಳ ಒತ್ತುವರಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಭೂ ಹಗರಣವಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣ ರೆಡ್ಡಿ ಆರೋಪಿಸಿದರು.</p>.<p>ತಾಲ್ಲೂಕಿನ ಯರ್ತಿಗಾನಹಳ್ಳಿ ಮೂಲಕ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರದೇಶದಲ್ಲಿ ಶನಿವಾರ ಕೆಆರ್ಎಸ್ ಪಕ್ಷ, ವಿವಿಧ ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಹೋರಾಟಗಾರರು ಹಮ್ಮಿಕೊಂಡಿದ್ದ ‘ಒತ್ತುವರಿ ತೆರವು ಜಾಥಾ’ದಲ್ಲಿ ಮಾತನಾಡಿದರು.</p>.<p>ಬಡವರು, ದೀನ ದಲಿತರಿಗೆ ಸೇರಬೇಕಾದ ಅಂದಾಜು 800 ಎಕರೆ ಸರ್ಕಾರಿ ಭೂಮಿಯನ್ನು ಪ್ರಭಾವಿ ರಾಜಕೀಯ ಕುಟುಂಬಗಳು ಹಾಗೂ ಶ್ರೀಮಂತರು ಕಬಳಿಸಿರುವ ಗಂಭೀರ ಆರೋಪವಿದೆ. ಕೆರೆ, ಕಾಲುವೆ, ರಾಜಕಾಲುವೆ, ಗೋಮಾಳ ಮತ್ತು ಗ್ರಾಮಠಾಣಾ ಪ್ರದೇಶಗಳನ್ನು ಅತಿಕ್ರಮಿಸಿ ಮಣ್ಣು ತುಂಬಲಾಗಿದೆ ಎಂದು ದೂರಿದರು.</p>.<p>ಇನಾಂ ರದ್ದು ಕಾಯ್ದೆ ರಾಜ್ಯದ ಇತರ ಭಾಗಗಳಲ್ಲಿ ಜಾರಿಯಾಗಿದ್ದರೂ, ಈ ಗ್ರಾಮಗಳಿಗೆ ಮಾತ್ರ ಅನ್ವಯವಾಗದೇ ಇರುವುದರಿಂದ ಸಂಶಯಗಳು ಹೆಚ್ಚುತ್ತಿವೆ. ರೈತರ ಹೆಸರಿನಲ್ಲಿದ್ದ ದಾಖಲೆಗಳು ಕಚೇರಿಗಳಲ್ಲಿ ಕಾಣೆಯಾಗಿದ್ದು, ಖರಾಬು ಜಾಗಗಳಲ್ಲಿ ಗ್ರಾಮವನ್ನು ವ್ಯವಸ್ಥಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಅಪಾದಿಸಿದರು.</p>.<p>ಜಾಥಾದಲ್ಲಿ ಭಾಗವಹಿಸಿದ ಹೋರಾಟಗಾರರು ಮತ್ತು ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸ್ಥಳಕ್ಕೆ ತೆರಳಿ, ಭೂಮಿಯ ಅಳತೆ ಪರಿಶೀಲನೆ ನಡೆಸಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಸಂಕೇತಿಕವಾಗಿ ನಡೆಸಿದರು. ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ ಹಾಗೂ ಕೋಲಾರ ಭಾಗಗಳಿಂದ ಜನರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ನಂತರ ಅಕ್ಲೇನಹಳ್ಳಿ–ಮಲ್ಲೇನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಸಭೆ ನಡೆಸಿ, ಭೂ ಹಗರಣದಿಂದ ಉಂಟಾದ ಸಮಸ್ಯೆಗಳು ಹಾಗೂ ಇತ್ತೀಚೆಗೆ ರಾಜ್ಯ ಸಚಿವ ಸಂಪುಟದಲ್ಲಿ ಈ ವಿಷಯವಾಗಿ ಕೈಗೊಂಡ ಚರ್ಚೆಗಳ ಕುರಿತು ಗ್ರಾಮಸ್ಥರಿಗೆ ವಿವರ ನೀಡಲಾಯಿತು. ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿಖಿಲ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ಸರ್ವೆ ಪೂರ್ಣ , ಹಸ್ತಾಂತರ ಬಾಕಿ</p><p>ಸ್ಥಳಕ್ಕೆ ಆಗಮಿಸಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಕೆಆರ್ಎಸ್ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ ಕೆರೆ ಕೋಡಿ ರಾಜಕಾಲುವೆ ಗುಂಡು ತೋಪು ಸೇರಿದಂತೆ ಸರ್ಕಾರಿ ಜಮೀನುಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ತಿಳಿಸಿದರು. ಅವುಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವುದಷ್ಟೇ ಬಾಕಿಯಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿಂದಿನ ದಿನಗಳಲ್ಲಿ ಒತ್ತುವರಿ ತೆರವುಗೊಳಿಸಿ ಹಾಕಿದ್ದ ನಾಮಫಲಕವನ್ನು ಯಾರು ತೆಗೆದುಹಾಕಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿತು. ಕಂದಾಯ ಇಲಾಖೆ ಸ್ಥಳವನ್ನು ಗುರುತಿಸಿ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರೆ ಅದರ ನಿರ್ವಹಣೆ ಕೈಗೊಳ್ಳುವುದಾಗಿ ಪಿಡಿಒ ಗಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>