ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತ್ಯಾಗ ಮನೋಭಾವ ಬೆಳೆಸಿಕೊಳ್ಳಿ’

Last Updated 22 ನವೆಂಬರ್ 2022, 21:48 IST
ಅಕ್ಷರ ಗಾತ್ರ

ಬೆಂಗಳೂರು: ‘ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ತ್ಯಾಗ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ದಕ್ಷಿಣ ಆಫ್ರಿಕಾದಲ್ಲಿರುವ ರಾಮಕೃಷ್ಣ ಕೇಂದ್ರದ ಅಧ್ಯಕ್ಷರಾದ ಸ್ವಾಮಿ ಸ್ವಾತ್ಮಾ ರಾಮಾನಂದ ಹೇಳಿದರು. ಇತ್ತೀಚಿಗೆ ನಡೆದ ಬಿಎನ್ಎಂ ವಿದ್ಯಾ ಸಂಸ್ಥೆ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿ
ಕೊಳ್ಳಬೇಕು. ಬಿಎನ್‌ಎಂ ಕಾಲೇಜನ್ನು ಆರಂಭದ ದಿನಗಳಲ್ಲಿ ಬಾಲಕಿಯರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಿರುವುದು ಸಂತಸದ ಸಂಗತಿ. ಇಂದು ಈ ಕಾಲೇಜಿನಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ. ಈ ಸಂಸ್ಥೆ ಶತಮಾನೋತ್ಸವ ಆಚರಣೆ ಮಾಡುವಂತೆ ಆಗಲಿ’ ಎಂದು ಶುಭ ಹಾರೈಸಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ (ಡಿಆರ್‌ಡಿಒ) ಪ್ರಧಾನ ನಿರ್ದೇಶಕಿ ಡಾ. ಜೆಸ್ಸಿ ಥಾಮಸ್‌ ಮಾತನಾಡಿ, ಇಂದು ಜ್ಞಾನ ಮತ್ತು ಆವಿಷ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ’ ಎಂದರು. ಕಾರ್ಯಕ್ರಮದಲ್ಲಿ ಬಿಎನ್ಎಂ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾದ ಸುನಂದಾ ಪ್ರಭಾಕರ ಜಾಧವ್ ಅವರನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT