2024–25ನೇ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 6.5ರಿಂದ ಶೇ 5.8ಕ್ಕೆ ಇಳಿಸಲಾಗಿದೆ. ಇದರಿಂದ ಬಜೆಟ್ ಬೆಳವಣಿಗೆಯ ಮಾನದಂಡಗಳನ್ನು ಪೂರೈಸುವ ನಿರೀಕ್ಷೆಯಿದೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಹೇಳಿದ್ದಾರೆ.
ಮಹಿಳೆಯರು, ಯುವಕರು, ರೈತರು ಮತ್ತು ಬಡವರನ್ನು ಒಳಗೊಂಡ ನಾಲ್ಕು ವರ್ಗದ ಆದ್ಯತಾ ಕ್ಷೇತ್ರಗಳ ಮೇಲೆ ಆಯವ್ಯಯವನ್ನು ಕೇಂದ್ರೀಕರಿಸಲಾಗಿದೆ. ಇದು ಹಣಕಾಸು ಗಾತ್ರಕ್ಕಿಂತ ಗುಣಮಟ್ಟದ ಬೆಳವಣಿಗೆಯ ಗುರಿ ಹೊಂದಿದೆ ಎಂದು ಹೇಳಿದ್ದಾರೆ.