<p>ಬೆಂಗಳೂರು: ರಾಜ್ಯ ಸರ್ಕಾರದ ₹400 ಕೋಟಿ ಅನುದಾನದಲ್ಲಿ ನಗರದಲ್ಲಿ ಹೆಚ್ಚು ವಾಹನ ದಟ್ಟಣೆ ಇರುವ ಒಂಬತ್ತು ಕಾರಿಡಾರ್ಗಳನ್ನು ಟೆಂಡರ್ ಶ್ಯೂರ್ ಅಥವಾ ಸ್ಮಾರ್ಟ್ ಸಿಟಿ ರಸ್ತೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಮುಂದಾಗಿದೆ.</p>.<p>ಬಿಬಿಎಂಪಿ ಈ ಯೋಜನೆಯಲ್ಲಿ 44 ಕಿಮೀ ರಸ್ತೆ ಹಾಗೂ 110 ಕಿಮೀ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಲಿದೆ. ಬಿಬಿಎಂಪಿ ಪ್ರಕಾರ, 12 ಹೆಚ್ಚು ವಾಹನದಟ್ಟಣೆ ಕಾರಿಡಾರ್ ಗಳಲ್ಲಿ ವೆಸ್ಟ್ ಆಫ್ ರಸ್ತೆ, ಬನ್ನೇರುಘಟ್ಟ ರಸ್ತೆಗಳನ್ನು ಈಗಾಗಲೇ<br />ಅಭಿವೃದ್ಧಿಪಡಿಸಲಾಗಿದೆ. ಅವುಗಳನ್ನು ಹೊರತುಪಡಿಸಿ 9 ಕಾರಿಡಾರ್ಗಳನ್ನು ವಾಹನ ಸವಾರರು ಹಾಗೂ ಪಾದಚಾರಿ ಸ್ನೇಹಿಯಾಗಿ ಅಭಿವೃದ್ಧಿ ಪಡಿಸಲಾಗುತ್ತದೆ.</p>.<p>ಒಂಬತ್ತು ಕಾರಿಡಾರ್ಗಳನ್ನೂ ಮರು ವಿನ್ಯಾಸಗೊಳಿಸಿ, ಏಕರೂಪದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಅಮೆರಿಕ ಹಾಗೂ ಯುರೋಪ್ನಲ್ಲಿ ಹೆಚ್ಚು ಬಳಕೆಯಲ್ಲಿರುವ ಸ್ಟೋನ್ ಮಾಸ್ಟಕ್ ಅಸ್ಫಾಲ್ಟ್ (ಎಸ್ಎಂಎ ) ತಂತ್ರಜ್ಞಾನದಲ್ಲಿ ಈ ಕಾರಿಡಾರ್ಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಈ ತಂತ್ರಜ್ಞಾನ ರಸ್ತೆಗಳು ಸ್ಥಿರ, ಜಾರುರಹಿತ, ಅತ್ಯುತ್ತಮ ಸಾಮರ್ಥ್ಯದಲ್ಲಿ ಇರಲಿವೆ.</p>.<p>ರಾಜ್ಯ ಸರ್ಕಾರದ ಈ ಅನುದಾನ ದಲ್ಲಿ ಹೆಚ್ಚು ಭಾಗವನ್ನು ಪಾದಚಾರಿ ಮಾರ್ಗ ಅಭಿವೃದ್ಧಿ ಪಡಿಸಲು ಉಪಯೋಗಿಸಲಾಗುತ್ತದೆ. ರಸ್ತೆ ಅಗಲ ಇರುವ ಸ್ಥಳದಲ್ಲಿ ಸೈಕಲ್ ಟ್ರಾಕ್ ನಿರ್ಮಿಸ ಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.</p>.<p>ರಾಜ್ಯ ಸರ್ಕಾರ ಈ ಯೋಜನೆಗೆ ಡಲ್ಟ್ ಅನ್ನು ಸಲಹೆಗಾರ ಸಂಸ್ಥೆಯಾಗಿ ನೇಮಿಸಿದ್ದು, ಕಾಮಗಾರಿ ಗುಣಮಟ್ಟ ಪರಿಶೀಲಿಸಲಿದೆ. ಹೊರ ವರ್ತುಲ ರಸ್ತೆ (ಒಆರ್ಆರ್) ರಸ್ತೆ ಸೇರಿದಂತೆ ಮುಖ್ಯ ರಸ್ತೆಗಳ ಅಭಿವೃದ್ಧಿ ಜವಾಬ್ದಾರಿ ಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ಡಿಸಿಎಲ್) ಈ ಮೊದಲು ಹೊಂದಿತ್ತು.</p>.<p>ಜನಪ್ರತಿನಿಧಿಗಳ ಒತ್ತಡದ ಮೇರೆಗೆ ರಾಜ್ಯ ಸರ್ಕಾರ ಈ ರಸ್ತೆಗಳ ನಿರ್ವಹಣೆ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಿ ಕಳೆದ ತಿಂಗಳು ಆದೇಶ ಹೊರಡಿಸಿದೆ.</p>.<p>₹400 ಕೋಟಿಯಲ್ಲಿ ₹273 ಕೋಟಿಯನ್ನು 9 ಕಾರಿಡಾರ್ ಅಭಿವೃದ್ಧಿಗೆ ಉಪಯೋಗಿಸಲಾಗುತ್ತಿದೆ. ಉಳಿದ ಹಣ ನಿರ್ವಹಣೆಗೆ ಮೀಸಲಿಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಸರ್ಕಾರದ ₹400 ಕೋಟಿ ಅನುದಾನದಲ್ಲಿ ನಗರದಲ್ಲಿ ಹೆಚ್ಚು ವಾಹನ ದಟ್ಟಣೆ ಇರುವ ಒಂಬತ್ತು ಕಾರಿಡಾರ್ಗಳನ್ನು ಟೆಂಡರ್ ಶ್ಯೂರ್ ಅಥವಾ ಸ್ಮಾರ್ಟ್ ಸಿಟಿ ರಸ್ತೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಮುಂದಾಗಿದೆ.</p>.<p>ಬಿಬಿಎಂಪಿ ಈ ಯೋಜನೆಯಲ್ಲಿ 44 ಕಿಮೀ ರಸ್ತೆ ಹಾಗೂ 110 ಕಿಮೀ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಲಿದೆ. ಬಿಬಿಎಂಪಿ ಪ್ರಕಾರ, 12 ಹೆಚ್ಚು ವಾಹನದಟ್ಟಣೆ ಕಾರಿಡಾರ್ ಗಳಲ್ಲಿ ವೆಸ್ಟ್ ಆಫ್ ರಸ್ತೆ, ಬನ್ನೇರುಘಟ್ಟ ರಸ್ತೆಗಳನ್ನು ಈಗಾಗಲೇ<br />ಅಭಿವೃದ್ಧಿಪಡಿಸಲಾಗಿದೆ. ಅವುಗಳನ್ನು ಹೊರತುಪಡಿಸಿ 9 ಕಾರಿಡಾರ್ಗಳನ್ನು ವಾಹನ ಸವಾರರು ಹಾಗೂ ಪಾದಚಾರಿ ಸ್ನೇಹಿಯಾಗಿ ಅಭಿವೃದ್ಧಿ ಪಡಿಸಲಾಗುತ್ತದೆ.</p>.<p>ಒಂಬತ್ತು ಕಾರಿಡಾರ್ಗಳನ್ನೂ ಮರು ವಿನ್ಯಾಸಗೊಳಿಸಿ, ಏಕರೂಪದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಅಮೆರಿಕ ಹಾಗೂ ಯುರೋಪ್ನಲ್ಲಿ ಹೆಚ್ಚು ಬಳಕೆಯಲ್ಲಿರುವ ಸ್ಟೋನ್ ಮಾಸ್ಟಕ್ ಅಸ್ಫಾಲ್ಟ್ (ಎಸ್ಎಂಎ ) ತಂತ್ರಜ್ಞಾನದಲ್ಲಿ ಈ ಕಾರಿಡಾರ್ಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಈ ತಂತ್ರಜ್ಞಾನ ರಸ್ತೆಗಳು ಸ್ಥಿರ, ಜಾರುರಹಿತ, ಅತ್ಯುತ್ತಮ ಸಾಮರ್ಥ್ಯದಲ್ಲಿ ಇರಲಿವೆ.</p>.<p>ರಾಜ್ಯ ಸರ್ಕಾರದ ಈ ಅನುದಾನ ದಲ್ಲಿ ಹೆಚ್ಚು ಭಾಗವನ್ನು ಪಾದಚಾರಿ ಮಾರ್ಗ ಅಭಿವೃದ್ಧಿ ಪಡಿಸಲು ಉಪಯೋಗಿಸಲಾಗುತ್ತದೆ. ರಸ್ತೆ ಅಗಲ ಇರುವ ಸ್ಥಳದಲ್ಲಿ ಸೈಕಲ್ ಟ್ರಾಕ್ ನಿರ್ಮಿಸ ಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.</p>.<p>ರಾಜ್ಯ ಸರ್ಕಾರ ಈ ಯೋಜನೆಗೆ ಡಲ್ಟ್ ಅನ್ನು ಸಲಹೆಗಾರ ಸಂಸ್ಥೆಯಾಗಿ ನೇಮಿಸಿದ್ದು, ಕಾಮಗಾರಿ ಗುಣಮಟ್ಟ ಪರಿಶೀಲಿಸಲಿದೆ. ಹೊರ ವರ್ತುಲ ರಸ್ತೆ (ಒಆರ್ಆರ್) ರಸ್ತೆ ಸೇರಿದಂತೆ ಮುಖ್ಯ ರಸ್ತೆಗಳ ಅಭಿವೃದ್ಧಿ ಜವಾಬ್ದಾರಿ ಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ಡಿಸಿಎಲ್) ಈ ಮೊದಲು ಹೊಂದಿತ್ತು.</p>.<p>ಜನಪ್ರತಿನಿಧಿಗಳ ಒತ್ತಡದ ಮೇರೆಗೆ ರಾಜ್ಯ ಸರ್ಕಾರ ಈ ರಸ್ತೆಗಳ ನಿರ್ವಹಣೆ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಿ ಕಳೆದ ತಿಂಗಳು ಆದೇಶ ಹೊರಡಿಸಿದೆ.</p>.<p>₹400 ಕೋಟಿಯಲ್ಲಿ ₹273 ಕೋಟಿಯನ್ನು 9 ಕಾರಿಡಾರ್ ಅಭಿವೃದ್ಧಿಗೆ ಉಪಯೋಗಿಸಲಾಗುತ್ತಿದೆ. ಉಳಿದ ಹಣ ನಿರ್ವಹಣೆಗೆ ಮೀಸಲಿಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>