‘ಚಾಲುಕ್ಯ ವೃತ್ತದಲ್ಲಿ ಚಾಲುಕ್ಯರ ಕಾಲದ ಗತವೈಭವ ಬಿಂಬಿಸುವುದು, ಅನಿಲ್ ಕುಂಬ್ಳೆ ವೃತ್ತವನ್ನು ಕ್ರೀಡಾ ಆಸಕ್ತಿಯ ಪರಿಕಲ್ಪನೆಯಡಿ ವಿನ್ಯಾಸಗೊಳಿಸುವುದು, ಮೈಸೂರು ಬ್ಯಾಂಕ್ ವೃತ್ತವನ್ನು ಪ್ರಸಿದ್ಧ ಕರಗ ಮಹೋತ್ಸವದ ವೈಭವದ ಮಾದರಿಯಲ್ಲಿ ರೂಪಿಸುವ ಉದ್ದೇಶವಿದೆ. ಪಾದಚಾರಿ ಮಾರ್ಗಗಳ ಸೌಂದರ್ಯೀಕರಣಕ್ಕೂ ಹೆಚ್ಚು ಒತ್ತು ನೀಡಲಾಗಿದೆ’ ಎಂದರು.