<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರದ ಪ್ರಮುಖ 12 ವೃತ್ತಗಳನ್ನು ಆಕರ್ಷಣೀಯಗೊಳಿಸಲು ಮುಂದಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ<br />ಹಾಗೂ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಈ ಸಂಬಂಧ ವಾಸ್ತುಶಿಲ್ಪಿಗಳ ಜೊತೆ ಸೋಮವಾರ ಸಭೆ ನಡೆಸಿದರು.</p>.<p>ಸಭೆಯ ಬಳಿಕ ಮಾತನಾಡಿದ ಗುಪ್ತ, ‘ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಹಾಗೂ ವೃತ್ತಗಳನ್ನು ಆಕರ್ಷಣೀಯಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ವಾಸ್ತುಶಿಲ್ಪಿಗಳು ವಿವಿಧ ಪರಿಕಲ್ಪನೆಗಳನ್ನಿಟ್ಟುಕೊಂಡು ವೃತ್ತಗಳ ವಿನ್ಯಾಸ ಸಿದ್ಧಪಡಿಸಿದ್ದಾರೆ. ಅವುಗಳನ್ನು ಕಾರ್ಯಗತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು. </p>.<p>‘ಚಾಲುಕ್ಯ ವೃತ್ತದಲ್ಲಿ ಚಾಲುಕ್ಯರ ಕಾಲದ ಗತವೈಭವ ಬಿಂಬಿಸುವುದು, ಅನಿಲ್ ಕುಂಬ್ಳೆ ವೃತ್ತವನ್ನು ಕ್ರೀಡಾ ಆಸಕ್ತಿಯ ಪರಿಕಲ್ಪನೆಯಡಿ ವಿನ್ಯಾಸಗೊಳಿಸುವುದು, ಮೈಸೂರು ಬ್ಯಾಂಕ್ ವೃತ್ತವನ್ನು ಪ್ರಸಿದ್ಧ ಕರಗ ಮಹೋತ್ಸವದ ವೈಭವದ ಮಾದರಿಯಲ್ಲಿ ರೂಪಿಸುವ ಉದ್ದೇಶವಿದೆ. ಪಾದಚಾರಿ ಮಾರ್ಗಗಳ ಸೌಂದರ್ಯೀಕರಣಕ್ಕೂ ಹೆಚ್ಚು ಒತ್ತು ನೀಡಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರದ ಪ್ರಮುಖ 12 ವೃತ್ತಗಳನ್ನು ಆಕರ್ಷಣೀಯಗೊಳಿಸಲು ಮುಂದಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ<br />ಹಾಗೂ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಈ ಸಂಬಂಧ ವಾಸ್ತುಶಿಲ್ಪಿಗಳ ಜೊತೆ ಸೋಮವಾರ ಸಭೆ ನಡೆಸಿದರು.</p>.<p>ಸಭೆಯ ಬಳಿಕ ಮಾತನಾಡಿದ ಗುಪ್ತ, ‘ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಹಾಗೂ ವೃತ್ತಗಳನ್ನು ಆಕರ್ಷಣೀಯಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ವಾಸ್ತುಶಿಲ್ಪಿಗಳು ವಿವಿಧ ಪರಿಕಲ್ಪನೆಗಳನ್ನಿಟ್ಟುಕೊಂಡು ವೃತ್ತಗಳ ವಿನ್ಯಾಸ ಸಿದ್ಧಪಡಿಸಿದ್ದಾರೆ. ಅವುಗಳನ್ನು ಕಾರ್ಯಗತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು. </p>.<p>‘ಚಾಲುಕ್ಯ ವೃತ್ತದಲ್ಲಿ ಚಾಲುಕ್ಯರ ಕಾಲದ ಗತವೈಭವ ಬಿಂಬಿಸುವುದು, ಅನಿಲ್ ಕುಂಬ್ಳೆ ವೃತ್ತವನ್ನು ಕ್ರೀಡಾ ಆಸಕ್ತಿಯ ಪರಿಕಲ್ಪನೆಯಡಿ ವಿನ್ಯಾಸಗೊಳಿಸುವುದು, ಮೈಸೂರು ಬ್ಯಾಂಕ್ ವೃತ್ತವನ್ನು ಪ್ರಸಿದ್ಧ ಕರಗ ಮಹೋತ್ಸವದ ವೈಭವದ ಮಾದರಿಯಲ್ಲಿ ರೂಪಿಸುವ ಉದ್ದೇಶವಿದೆ. ಪಾದಚಾರಿ ಮಾರ್ಗಗಳ ಸೌಂದರ್ಯೀಕರಣಕ್ಕೂ ಹೆಚ್ಚು ಒತ್ತು ನೀಡಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>