ಸಮಾವೇಶದಲ್ಲಿ ಅಲೆಮಾರಿಗಳಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂದುವರಿಯಲು ಜಾತಿ ಪ್ರಮಾಣ ಪತ್ರ ಸಮಸ್ಯೆ ನಿವಾರಿಸಬೇಕು. ಬಜೆಟ್ನಲ್ಲಿ ಘೋಷಿಸಿರುವ ‘ಅಲೆಮಾರಿ ಆಯೋಗ’ವನ್ನೂ ಕೂಡಲೇ ಅನುಷ್ಠಾನಕ್ಕೆ ತರಬೇಕು. ಎಸ್ಸಿ, ಎಸ್ಟಿ, ಒಬಿಸಿ ಅಲೆಮಾರಿ ಸಮುದಾಯಗಳು ಒಳಗೊಂಡಂತೆ ‘ಶಾಶ್ವತ ಆಯೋಗ’ ರಚನೆ ಮಾಡಬೇಕು’ ಎಂಬ ನಿರ್ಣಯ ಕೈಗೊಳ್ಳಲಾಯಿತು.