<p><strong>ಯಲಹಂಕ: ‘</strong>ಕಾರ್ಮಿಕರು ಈ ರಾಷ್ಟ್ರದ ಸಂಪತ್ತು. ಅವರ ಶ್ರಮದಿಂದಲೇ ಈ ದೇಶದ ಅಭಿವೃದ್ಧಿಯಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿ, ಸವಲತ್ತು ನೀಡದೆ ಅನ್ಯಾಯ ಎಸಗುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದರು.</p>.<p>ಭಾರತೀಯ ರಾಷ್ಟ್ರೀಯ ಕಟ್ಟಡ ನಿರ್ಮಾಣ, ಅರಣ್ಯ ಮತ್ತು ಮರಗೆಲಸ ಕಾರ್ಮಿಕರ ಒಕ್ಕೂಟದ ಆಶ್ರಯದಲ್ಲಿ ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಈ ದೇಶ ಅಭಿವೃದ್ಧಿಯಾಗಬೇಕಾದರೆ ಕಾರ್ಮಿಕರ ಅಭಿವೃದ್ಧಿ ಅತ್ಯಗತ್ಯ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಕಾರ್ಮಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ’ ಎಂದರು. </p>.<p>ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರ ಕುಂಟಿಯ ಮಾತನಾಡಿ, ‘ದೇಶದ ಜನಸಂಖ್ಯೆಯ ಶೇ 40ರಷ್ಟು ಕಾರ್ಮಿಕರಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>ಒಕ್ಕೂಟದ ರಾಜ್ಯಘಟಕದ ಅಧ್ಯಕ್ಷ ಬಿ.ಆರ್.ದಿನೇಶ್, ಸಂಘಟನಾ ಕಾರ್ಯದರ್ಶಿ ಜ್ಯೋತಿಪುರ ಚಂದ್ರು, ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ, ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕಾರ್ಮಿಕ ಸಂಘಟನೆಗಳ ಮುಖಂಡರಾದ ಶಿವಣ್ಣ, ವಿಜಯ್ ನಾಯಕ್, ಸಾಯಿ ಸತೀಶ್ ತೋಟಯ್ಯ, ಸೌಕತ್ ಆಲಿ, ಎ.ಜಾಕೀರ್ ಹುಸೇನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: ‘</strong>ಕಾರ್ಮಿಕರು ಈ ರಾಷ್ಟ್ರದ ಸಂಪತ್ತು. ಅವರ ಶ್ರಮದಿಂದಲೇ ಈ ದೇಶದ ಅಭಿವೃದ್ಧಿಯಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿ, ಸವಲತ್ತು ನೀಡದೆ ಅನ್ಯಾಯ ಎಸಗುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದರು.</p>.<p>ಭಾರತೀಯ ರಾಷ್ಟ್ರೀಯ ಕಟ್ಟಡ ನಿರ್ಮಾಣ, ಅರಣ್ಯ ಮತ್ತು ಮರಗೆಲಸ ಕಾರ್ಮಿಕರ ಒಕ್ಕೂಟದ ಆಶ್ರಯದಲ್ಲಿ ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಈ ದೇಶ ಅಭಿವೃದ್ಧಿಯಾಗಬೇಕಾದರೆ ಕಾರ್ಮಿಕರ ಅಭಿವೃದ್ಧಿ ಅತ್ಯಗತ್ಯ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಕಾರ್ಮಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ’ ಎಂದರು. </p>.<p>ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರ ಕುಂಟಿಯ ಮಾತನಾಡಿ, ‘ದೇಶದ ಜನಸಂಖ್ಯೆಯ ಶೇ 40ರಷ್ಟು ಕಾರ್ಮಿಕರಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>ಒಕ್ಕೂಟದ ರಾಜ್ಯಘಟಕದ ಅಧ್ಯಕ್ಷ ಬಿ.ಆರ್.ದಿನೇಶ್, ಸಂಘಟನಾ ಕಾರ್ಯದರ್ಶಿ ಜ್ಯೋತಿಪುರ ಚಂದ್ರು, ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ, ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕಾರ್ಮಿಕ ಸಂಘಟನೆಗಳ ಮುಖಂಡರಾದ ಶಿವಣ್ಣ, ವಿಜಯ್ ನಾಯಕ್, ಸಾಯಿ ಸತೀಶ್ ತೋಟಯ್ಯ, ಸೌಕತ್ ಆಲಿ, ಎ.ಜಾಕೀರ್ ಹುಸೇನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>