<p><strong>ಬೆಂಗಳೂರು</strong>: ‘ಅಭಿವೃದ್ಧಿಯ ಹಾದಿಯಲ್ಲಿ ಪಕ್ಷ ರಾಜಕಾರಣವನ್ನು ಮರೆಯೋಣ. ಪಕ್ಷಾತೀತವಾಗಿ ಕೆಲಸ ಮಾಡಿ, ಕೊನೆಯ ತಿಂಗಳು ಚುನಾವಣೆಗಾಗಿ ಪಕ್ಷ ರಾಜಕಾರಣ ಮಾಡೋಣ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿ, ಕೋವಿಡ್ ಚಿಕಿತ್ಸಾ ಕೇಂದ್ರ, ಕ್ರೀಡಾಂಗಣ ಉದ್ಘಾಟಿಸಿದ ಅವರು, ಜಾಲಹಳ್ಳಿ ವೃತ್ತದಲ್ಲಿ ‘ಗ್ರೇಡ್ ಸಪರೇಟರ್’ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಕಾಮಗಾರಿಗಳು ಬೇಗ ಪೂರ್ಣಗೊಳ್ಳುತ್ತವೆ. ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಬೇಕು. ಅದರಲ್ಲಿ ಪಕ್ಷ ರಾಜಕಾರಣ ಇರಕೂಡದು. ಯೋಜನಾಬದ್ಧವಾಗಿ ನಗರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ನಗರದಲ್ಲಿ ಅತಿ ದಟ್ಟಣೆಯ 12 ಮಾರ್ಗಗಳಲ್ಲಿ ವಿಸ್ತರಣಾ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜಧಾನಿಯ ಸಂಚಾರ ದಟ್ಟಣೆ ತಗ್ಗುವ ನಿರೀಕ್ಷೆ ಇದೆ. ₹ 450 ಕೋಟಿ ವೆಚ್ಚದ ಈ ಕಾಮಗಾರಿಗಳು ಪೂರ್ಣಗೊಂಡರೆ ನಗರವನ್ನು ಸಂಪರ್ಕಿಸುವ ಎಲ್ಲ ಪ್ರಮುಖ ಮಾರ್ಗಗಳೂ ದಟ್ಟಣೆಯಿಂದ ಮುಕ್ತಿ ಪಡೆಯಲಿವೆ ಎಂದರು.</p>.<p>ಜಾಲಹಳ್ಳಿ ವೃತ್ತದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದವು. ದುರ್ಘಟನೆಗಳನ್ನು ತಪ್ಪಿಸಲು ಇಲ್ಲಿ ‘ಗ್ರೇಡ್ ಸಪರೇಟರ್’ ನಿರ್ಮಾಣ ಅನಿವಾರ್ಯವಾಗಿತ್ತು. ಈ ಹಿಂದೆ ತೆಗೆದುಕೊಂಡಿದ್ದ ತೀರ್ಮಾನವನ್ನು ಈಗ ಅನುಷ್ಠಾನಕ್ಕೆ ತರಲಾಗುತ್ತಿದೆ. ನಿರ್ದಿಷ್ಟ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಗೊರಗುಂಟೆ ಪಾಳ್ಯ ವೃತ್ತದಲ್ಲಿ ಸಂಚಾರ ದಟ್ಟಣೆ ಮತ್ತು ಅಪಘಾತ ತಪ್ಪಿಸಲು ಮತ್ತಷ್ಟು ಕ್ರಮಗಳ ಅಗತ್ಯವಿದೆ. ಸಚಿವ ಮುನಿರತ್ನ ಮತ್ತು ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವರು ಈಗಾಗಲೇ ಗಮನಕ್ಕೆ ತಂದಿದ್ದಾರೆ. ಸಮಗ್ರ ಯೋಜನೆ ರೂಪಿಸಿ ತ್ವರಿತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದರು.</p>.<p><strong>ಚಿತ್ರಣ ಬದಲಾವಣೆಗೆ ಸಜ್ಜು:</strong> ಲಗ್ಗೆರೆಯ ರಾಕ್ಷಸಿ ಹಳ್ಳದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಅಂಬರೀಷ್ ಈಜುಕೊಳ, ಡಾ. ರಾಜ್ಕುಮಾರ್ ಉದ್ಯಾನ ಮತ್ತು ವಿಷ್ಣುವರ್ಧನ್ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಬೊಮ್ಮಾಯಿ, ‘ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯನ್ನು ₹ 6,000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆದಿದೆ. ಈ ಯೋಜನೆಯಡಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಲಭಿಸಲಿದೆ. ರಾಜಧಾನಿಯ ಚಿತ್ರಣವನ್ನೇ ಬದಲಿಸಲು ಸರ್ಕಾರ ಸಜ್ಜಾಗಿದೆ’ ಎಂದು ಹೇಳಿದರು.</p>.<p>ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ದೀರ್ಘ ಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಜನಸ್ನೇಹಿ ಆಡಳಿತವನ್ನು ನೀಡಲಾಗುವುದು. ಇದಕ್ಕಾಗಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಸ್ಥಳೀಯ ಶಾಸಕರೂ ಆಗಿರುವ ಸಚಿವ ಮುನಿರತ್ನ, ಸಚಿವರಾದ ಆರ್. ಅಶೋಕ, ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಸಂಸದ ಡಿ.ಕೆ. ಸುರೇಶ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಉಪಸ್ಥತರಿದ್ದರು.</p>.<p><strong>ಕೋವಿಡ್ ಚಿಕಿತ್ಸಾ ಕೇಂದ್ರ ಉದ್ಘಾಟನೆ</strong></p>.<p>ಯಶವಂತಪುರದಲ್ಲಿ ₹ 36.91 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಲ್ಟಿ ಸ್ಪೆಷಾಲಿಟಿ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಬಸವರಾಜ ಬೊಮ್ಮಾಯಿ ಭಾನುವಾರ ಉದ್ಘಾಟಿಸಿದರು.</p>.<p>ನಾಲ್ಕು ಮಹಡಿಯ ಈ ಚಿಕಿತ್ಸಾ ಕೇಂದ್ರದಲ್ಲಿ ಎಲ್ಲ ಹಾಸಿಗೆಗಳಿಗೂ ಆಮ್ಲಜನಕದ ಸೌಲಭ್ಯ ಕಲ್ಪಿಸಲಾಗಿದೆ. ಸ್ಥಳದಲ್ಲೇ 10 ಕಿಲೋ ಲೀಟರ್ ಸಾಮರ್ಥ್ಯದ ಆಮ್ಲಜನಕ ಸಂಗ್ರಹಣಾ ಘಟಕವನ್ನು ಅಳವಡಿಸಲಾಗಿದೆ. ಒಂದು ತಿಂಗಳ ಅವಧಿಗೆ ದಿನದ 24 ಗಂಟೆಯೂ ಎಲ್ಲ ಹಾಸಿಗೆಗಳಿಗೆ ಆಮ್ಲಜನಕ ಒದಗಿಸುವ ಸಾಮರ್ಥ್ಯವನ್ನು ಈ ಕೇಂದ್ರ ಹೊಂದಿದೆ</p>.<p><strong>ಷಟಲ್ ಬ್ಯಾಡ್ಮಿಂಟನ್ ಆಡಿದ ಸಿಎಂ</strong></p>.<p>ಮತ್ತೀಕೆರೆಯ ಜೆ.ಪಿ. ಉದ್ಯಾನದಲ್ಲಿ ₹ 5.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟಿಸಿದ ಮುಖ್ಯಮಂತ್ರಿ, ಸಚಿವರ ಜತೆ ಷಟಲ್ ಬ್ಯಾಡ್ಮಿಂಟನ್ ಆಡಿದರು. ಈ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ ಆರು ಅಂಕಣಗಳನ್ನು ನಿರ್ಮಿಸಲಾಗಿದೆ.</p>.<p><strong>₹ 361.81 ಕೋಟಿ ವೆಚ್ಚದ ಕಾಮಗಾರಿಗಳು</strong></p>.<p>ತೋಟಗಾರಿಕಾ ಸಚಿವ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಐದು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಯವರು ಹಲವು ಕಾಮಗಾರಿಗಳಿಗೆ ಶಂಕುಸ್ಥಾನೆ ನೆರವೇರಿಸಿದರು. ಕೋವಿಡ್ ಚಿಕಿತ್ಸಾ ಕೇಂದ್ರ, ಕ್ರೀಡಾಂಗಣ ಸೇರಿದಂತೆ ಈಗಾಗಲೇ ಸಿದ್ಧವಾಗಿರುವ ಸೌಲಭ್ಯಗಳನ್ನು ಉದ್ಘಾಟಿಸಿದರು. ಈ ಎಲ್ಲವುಗಳ ಒಟ್ಟು ಮೊತ್ತ ₹ 361.81 ಕೋಟಿ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಭಿವೃದ್ಧಿಯ ಹಾದಿಯಲ್ಲಿ ಪಕ್ಷ ರಾಜಕಾರಣವನ್ನು ಮರೆಯೋಣ. ಪಕ್ಷಾತೀತವಾಗಿ ಕೆಲಸ ಮಾಡಿ, ಕೊನೆಯ ತಿಂಗಳು ಚುನಾವಣೆಗಾಗಿ ಪಕ್ಷ ರಾಜಕಾರಣ ಮಾಡೋಣ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿ, ಕೋವಿಡ್ ಚಿಕಿತ್ಸಾ ಕೇಂದ್ರ, ಕ್ರೀಡಾಂಗಣ ಉದ್ಘಾಟಿಸಿದ ಅವರು, ಜಾಲಹಳ್ಳಿ ವೃತ್ತದಲ್ಲಿ ‘ಗ್ರೇಡ್ ಸಪರೇಟರ್’ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಕಾಮಗಾರಿಗಳು ಬೇಗ ಪೂರ್ಣಗೊಳ್ಳುತ್ತವೆ. ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಬೇಕು. ಅದರಲ್ಲಿ ಪಕ್ಷ ರಾಜಕಾರಣ ಇರಕೂಡದು. ಯೋಜನಾಬದ್ಧವಾಗಿ ನಗರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ನಗರದಲ್ಲಿ ಅತಿ ದಟ್ಟಣೆಯ 12 ಮಾರ್ಗಗಳಲ್ಲಿ ವಿಸ್ತರಣಾ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜಧಾನಿಯ ಸಂಚಾರ ದಟ್ಟಣೆ ತಗ್ಗುವ ನಿರೀಕ್ಷೆ ಇದೆ. ₹ 450 ಕೋಟಿ ವೆಚ್ಚದ ಈ ಕಾಮಗಾರಿಗಳು ಪೂರ್ಣಗೊಂಡರೆ ನಗರವನ್ನು ಸಂಪರ್ಕಿಸುವ ಎಲ್ಲ ಪ್ರಮುಖ ಮಾರ್ಗಗಳೂ ದಟ್ಟಣೆಯಿಂದ ಮುಕ್ತಿ ಪಡೆಯಲಿವೆ ಎಂದರು.</p>.<p>ಜಾಲಹಳ್ಳಿ ವೃತ್ತದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದವು. ದುರ್ಘಟನೆಗಳನ್ನು ತಪ್ಪಿಸಲು ಇಲ್ಲಿ ‘ಗ್ರೇಡ್ ಸಪರೇಟರ್’ ನಿರ್ಮಾಣ ಅನಿವಾರ್ಯವಾಗಿತ್ತು. ಈ ಹಿಂದೆ ತೆಗೆದುಕೊಂಡಿದ್ದ ತೀರ್ಮಾನವನ್ನು ಈಗ ಅನುಷ್ಠಾನಕ್ಕೆ ತರಲಾಗುತ್ತಿದೆ. ನಿರ್ದಿಷ್ಟ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಗೊರಗುಂಟೆ ಪಾಳ್ಯ ವೃತ್ತದಲ್ಲಿ ಸಂಚಾರ ದಟ್ಟಣೆ ಮತ್ತು ಅಪಘಾತ ತಪ್ಪಿಸಲು ಮತ್ತಷ್ಟು ಕ್ರಮಗಳ ಅಗತ್ಯವಿದೆ. ಸಚಿವ ಮುನಿರತ್ನ ಮತ್ತು ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವರು ಈಗಾಗಲೇ ಗಮನಕ್ಕೆ ತಂದಿದ್ದಾರೆ. ಸಮಗ್ರ ಯೋಜನೆ ರೂಪಿಸಿ ತ್ವರಿತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದರು.</p>.<p><strong>ಚಿತ್ರಣ ಬದಲಾವಣೆಗೆ ಸಜ್ಜು:</strong> ಲಗ್ಗೆರೆಯ ರಾಕ್ಷಸಿ ಹಳ್ಳದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಅಂಬರೀಷ್ ಈಜುಕೊಳ, ಡಾ. ರಾಜ್ಕುಮಾರ್ ಉದ್ಯಾನ ಮತ್ತು ವಿಷ್ಣುವರ್ಧನ್ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಬೊಮ್ಮಾಯಿ, ‘ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯನ್ನು ₹ 6,000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆದಿದೆ. ಈ ಯೋಜನೆಯಡಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಲಭಿಸಲಿದೆ. ರಾಜಧಾನಿಯ ಚಿತ್ರಣವನ್ನೇ ಬದಲಿಸಲು ಸರ್ಕಾರ ಸಜ್ಜಾಗಿದೆ’ ಎಂದು ಹೇಳಿದರು.</p>.<p>ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ದೀರ್ಘ ಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಜನಸ್ನೇಹಿ ಆಡಳಿತವನ್ನು ನೀಡಲಾಗುವುದು. ಇದಕ್ಕಾಗಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಸ್ಥಳೀಯ ಶಾಸಕರೂ ಆಗಿರುವ ಸಚಿವ ಮುನಿರತ್ನ, ಸಚಿವರಾದ ಆರ್. ಅಶೋಕ, ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಸಂಸದ ಡಿ.ಕೆ. ಸುರೇಶ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಉಪಸ್ಥತರಿದ್ದರು.</p>.<p><strong>ಕೋವಿಡ್ ಚಿಕಿತ್ಸಾ ಕೇಂದ್ರ ಉದ್ಘಾಟನೆ</strong></p>.<p>ಯಶವಂತಪುರದಲ್ಲಿ ₹ 36.91 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಲ್ಟಿ ಸ್ಪೆಷಾಲಿಟಿ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಬಸವರಾಜ ಬೊಮ್ಮಾಯಿ ಭಾನುವಾರ ಉದ್ಘಾಟಿಸಿದರು.</p>.<p>ನಾಲ್ಕು ಮಹಡಿಯ ಈ ಚಿಕಿತ್ಸಾ ಕೇಂದ್ರದಲ್ಲಿ ಎಲ್ಲ ಹಾಸಿಗೆಗಳಿಗೂ ಆಮ್ಲಜನಕದ ಸೌಲಭ್ಯ ಕಲ್ಪಿಸಲಾಗಿದೆ. ಸ್ಥಳದಲ್ಲೇ 10 ಕಿಲೋ ಲೀಟರ್ ಸಾಮರ್ಥ್ಯದ ಆಮ್ಲಜನಕ ಸಂಗ್ರಹಣಾ ಘಟಕವನ್ನು ಅಳವಡಿಸಲಾಗಿದೆ. ಒಂದು ತಿಂಗಳ ಅವಧಿಗೆ ದಿನದ 24 ಗಂಟೆಯೂ ಎಲ್ಲ ಹಾಸಿಗೆಗಳಿಗೆ ಆಮ್ಲಜನಕ ಒದಗಿಸುವ ಸಾಮರ್ಥ್ಯವನ್ನು ಈ ಕೇಂದ್ರ ಹೊಂದಿದೆ</p>.<p><strong>ಷಟಲ್ ಬ್ಯಾಡ್ಮಿಂಟನ್ ಆಡಿದ ಸಿಎಂ</strong></p>.<p>ಮತ್ತೀಕೆರೆಯ ಜೆ.ಪಿ. ಉದ್ಯಾನದಲ್ಲಿ ₹ 5.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟಿಸಿದ ಮುಖ್ಯಮಂತ್ರಿ, ಸಚಿವರ ಜತೆ ಷಟಲ್ ಬ್ಯಾಡ್ಮಿಂಟನ್ ಆಡಿದರು. ಈ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ ಆರು ಅಂಕಣಗಳನ್ನು ನಿರ್ಮಿಸಲಾಗಿದೆ.</p>.<p><strong>₹ 361.81 ಕೋಟಿ ವೆಚ್ಚದ ಕಾಮಗಾರಿಗಳು</strong></p>.<p>ತೋಟಗಾರಿಕಾ ಸಚಿವ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಐದು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಯವರು ಹಲವು ಕಾಮಗಾರಿಗಳಿಗೆ ಶಂಕುಸ್ಥಾನೆ ನೆರವೇರಿಸಿದರು. ಕೋವಿಡ್ ಚಿಕಿತ್ಸಾ ಕೇಂದ್ರ, ಕ್ರೀಡಾಂಗಣ ಸೇರಿದಂತೆ ಈಗಾಗಲೇ ಸಿದ್ಧವಾಗಿರುವ ಸೌಲಭ್ಯಗಳನ್ನು ಉದ್ಘಾಟಿಸಿದರು. ಈ ಎಲ್ಲವುಗಳ ಒಟ್ಟು ಮೊತ್ತ ₹ 361.81 ಕೋಟಿ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>