<p><strong>ಬೆಂಗಳೂರು: </strong>'ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು, ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆಯನ್ನುಂಟು ಮಾಡಬಾರದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಂಚಾರ ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>‘ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನಿಲ್ಲುವ ಪೊಲೀಸರು, ವಾಹನ ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ದಟ್ಟಣೆ ಹೆಚ್ಚಾಗುತ್ತಿದೆ’ ಎಂಬುದಾಗಿ ಸಾರ್ವಜನಿಕರೊಬ್ಬರು ಟ್ವೀಟ್ ಮಾಡಿದ್ದರು.</p>.<p><a href="https://www.prajavani.net/district/bengaluru-city/bengaluru-rto-asi-constable-suspended-for-takin-bribe-from-inter-state-vehicles-949316.html" itemprop="url">ದಾಖಲೆ ಪರಿಶೀಲನೆ ನೆಪದಲ್ಲಿ ₹2,500 ವಸೂಲಿ: ಎಎಸ್ಐ, ಕಾನ್ಸ್ಟೆಬಲ್ ಅಮಾನತು </a></p>.<p>ಇದಕ್ಕೆ ಸ್ಪಂದಿಸಿರುವ ಪ್ರವೀಣ್ ಸೂದ್, ‘ದಾಖಲೆ ನೆಪದಲ್ಲಿ ವಾಹನ ತಡೆಯಬೇಡಿ. ಕಣ್ಣಿಗೆ ಕಾಣುವಂತೆ ನಿಯಮ ಉಲ್ಲಂಘನೆಯಾದರೆ ಹಾಗೂ ಮದ್ಯ ತಪಾಸಣೆಗೆ ಅಗತ್ಯವಿದ್ದರೆ ವಾಹನ ತಪಾಸಣೆ ಮಾಡಿ’ ಎಂದಿದ್ದಾರೆ.</p>.<p>ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹಾಗೂ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೂ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>'ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು, ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆಯನ್ನುಂಟು ಮಾಡಬಾರದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಂಚಾರ ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>‘ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನಿಲ್ಲುವ ಪೊಲೀಸರು, ವಾಹನ ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ದಟ್ಟಣೆ ಹೆಚ್ಚಾಗುತ್ತಿದೆ’ ಎಂಬುದಾಗಿ ಸಾರ್ವಜನಿಕರೊಬ್ಬರು ಟ್ವೀಟ್ ಮಾಡಿದ್ದರು.</p>.<p><a href="https://www.prajavani.net/district/bengaluru-city/bengaluru-rto-asi-constable-suspended-for-takin-bribe-from-inter-state-vehicles-949316.html" itemprop="url">ದಾಖಲೆ ಪರಿಶೀಲನೆ ನೆಪದಲ್ಲಿ ₹2,500 ವಸೂಲಿ: ಎಎಸ್ಐ, ಕಾನ್ಸ್ಟೆಬಲ್ ಅಮಾನತು </a></p>.<p>ಇದಕ್ಕೆ ಸ್ಪಂದಿಸಿರುವ ಪ್ರವೀಣ್ ಸೂದ್, ‘ದಾಖಲೆ ನೆಪದಲ್ಲಿ ವಾಹನ ತಡೆಯಬೇಡಿ. ಕಣ್ಣಿಗೆ ಕಾಣುವಂತೆ ನಿಯಮ ಉಲ್ಲಂಘನೆಯಾದರೆ ಹಾಗೂ ಮದ್ಯ ತಪಾಸಣೆಗೆ ಅಗತ್ಯವಿದ್ದರೆ ವಾಹನ ತಪಾಸಣೆ ಮಾಡಿ’ ಎಂದಿದ್ದಾರೆ.</p>.<p>ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹಾಗೂ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೂ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>