ಗಂಭೀರ ಪ್ರಕರಣಗಳಲ್ಲಿ ಸಕಾಲಕ್ಕೆ ಎಫ್ಐಆರ್ ದಾಖಲಿಸದ ಎಸ್ಎಚ್ಒಗಳಿಗೆ ಸಂಬಂಧಪಟ್ಟ ಮುಖ್ಯಸ್ಥರು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಇದರೊಟ್ಟಿಗೆ, ಇಲಾಖಾ ವಿಚಾರಣೆ ಆರಂಭಿಸಬೇಕು. ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು, ಪೋಕ್ಸೊ ಹಾಗೂ ಬಾಲಾಪರಾಧ ಕಾಯ್ದೆ ಬಗ್ಗೆ ಎಸ್ಎಚ್ಒ ಮತ್ತು ಐಒಗಳಲ್ಲಿ ಜಾಗೃತಿ ಮೂಡಿಸಲು ಕಾರ್ಯಾಗಾರ ನಡೆಸುವಂತೆ ಪ್ರವೀಣ್ ಸೂದ್ ಸೂಚಿಸಿದ್ದಾರೆ.