<p><strong>ಬೆಂಗಳೂರು:</strong> ‘ಪುತ್ರಿ ಅನನ್ಯಾ ಭಟ್ 2003ರಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದಾಗ ನಾಪತ್ತೆ ಆಗಿದ್ದಾಳೆ’ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ದೂರು ನೀಡಿದ್ದ ಸುಜಾತಾ ಭಟ್ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮನೆ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದೆ.</p>.<p>ಪುತ್ರಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ಅವರು ಗೊಂದಲದ ಹೇಳಿಕೆ ನೀಡುತ್ತಿರುವ ಪರಿಣಾಮ ಅವರ ಮನೆಗೆ ಮಾಧ್ಯಮ ಪ್ರತಿನಿಧಿಗಳು, ಯೂಟ್ಯೂಬರ್ಗಳು ಭೇಟಿ ನೀಡುತ್ತಿದ್ದಾರೆ.</p>.<p>‘ನನಗೆ ಆರೋಗ್ಯ ಸರಿಯಿಲ್ಲ. ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ. ಸಾರ್ವಜನಿಕರು ಮನೆಯತ್ತ ಬಾರದಂತೆ ನಿರ್ಬಂಧ ಹೇರಿ. ಮಾಧ್ಯಮದವರೂ ಮನೆಯ ಹತ್ತಿರ ಬಾರದಂತೆ ನೋಡಿಕೊಳ್ಳಿ’ ಎಂದು ಸುಜಾತಾ ಅವರು ಮನವಿ ಮಾಡಿದ್ದರಿಂದ ಬನಶಂಕರಿ ಪೊಲೀಸರು ಭದ್ರತೆ ನೀಡಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ವೊಂದರಲ್ಲಿ ಸುಜಾತಾ ಭಟ್ ಅವರು ಮೂರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಅವರು, ಎರಡು ದಿನಗಳ ಹಿಂದಷ್ಟೇ ನಗರಕ್ಕೆ ಬಂದು ಬನಶಂಕರಿಯ ಮನೆಯಲ್ಲಿ ವಾಸ್ತವ್ಯ ಮಾಡಿದ್ದಾರೆ. </p>.<p>ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಬಿಎನ್ಎಸ್ 131 ಸೆಕ್ಷನ್ನಡಿ ಸುಜಾತಾ ಅವರಿಗೆ ಎಸ್ಐಟಿ ನೋಟಿಸ್ ಜಾರಿ ಮಾಡಿದ್ದು, ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಯ್ದೆ ಅನ್ವಯ ದೂರುದಾರರು ಅಥವಾ ಸಾಕ್ಷಿದಾರರು 60 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಅಥವಾ 18 ವರ್ಷದ ಒಳಗಿನವರಾಗಿದ್ದರೆ ತನಿಖಾಧಿಕಾರಿಗಳೇ ಅವರ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ಅವಕಾಶ ಇದೆ. ಅನಾರೋಗ್ಯದ ಕಾರಣ ನೀಡಿ ಸುಜಾತಾ ಅವರು ಈ ಹಿಂದೆ ವಿಚಾರಣೆಗೆ ಗೈರಾಗಿದ್ದರು. ಪ್ರಕರಣದ ತನಿಖೆ ಚುರುಕಾಗಿದ್ದು, ಸದ್ಯದಲ್ಲೇ ಹೇಳಿಕೆ ದಾಖಲು ಮಾಡಿಕೊಳ್ಳಲಾಗುವುದು. ಸುಜಾತಾ ಭಟ್ ಅವರು ಮಾಧ್ಯಮಗಳ ಎದುರು ವಿಭಿನ್ನ ಹೇಳಿಕೆ ನೀಡಿದ್ದಾರೆ. ದೂರಿನಲ್ಲೇ ಬೇರೆ ರೀತಿಯಲ್ಲಿ ಉಲ್ಲೇಖಿಸಿದ್ದರು. ಎಲ್ಲವನ್ನೂ ಪರಿಶೀಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<p>‘ಅನನ್ಯಾ ಭಟ್ ನನ್ನ ಮಗಳು ಅಲ್ಲ. ಈ ಬಗ್ಗೆ ಕಥೆ ಕಟ್ಟಿದ್ದೇನೆ’ ಎಂದು ಹೇಳಿದ್ದರು. ಅದಾದ ಮೇಲೆ, ‘ಅನನ್ಯಾ ನನ್ನ ಮಗಳು. ಕಾರಿನೊಳಗೆ ತುರುಕಿ ಸಂದರ್ಶನದ ವೇಳೆ ಬೆದರಿಸಿ ನನ್ನ ಕಡೆಯಿಂದ ಹೇಳಿಕೆ ಕೊಡಿಸಿದ್ದಾರೆ’ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪುತ್ರಿ ಅನನ್ಯಾ ಭಟ್ 2003ರಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದಾಗ ನಾಪತ್ತೆ ಆಗಿದ್ದಾಳೆ’ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ದೂರು ನೀಡಿದ್ದ ಸುಜಾತಾ ಭಟ್ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮನೆ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದೆ.</p>.<p>ಪುತ್ರಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ಅವರು ಗೊಂದಲದ ಹೇಳಿಕೆ ನೀಡುತ್ತಿರುವ ಪರಿಣಾಮ ಅವರ ಮನೆಗೆ ಮಾಧ್ಯಮ ಪ್ರತಿನಿಧಿಗಳು, ಯೂಟ್ಯೂಬರ್ಗಳು ಭೇಟಿ ನೀಡುತ್ತಿದ್ದಾರೆ.</p>.<p>‘ನನಗೆ ಆರೋಗ್ಯ ಸರಿಯಿಲ್ಲ. ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ. ಸಾರ್ವಜನಿಕರು ಮನೆಯತ್ತ ಬಾರದಂತೆ ನಿರ್ಬಂಧ ಹೇರಿ. ಮಾಧ್ಯಮದವರೂ ಮನೆಯ ಹತ್ತಿರ ಬಾರದಂತೆ ನೋಡಿಕೊಳ್ಳಿ’ ಎಂದು ಸುಜಾತಾ ಅವರು ಮನವಿ ಮಾಡಿದ್ದರಿಂದ ಬನಶಂಕರಿ ಪೊಲೀಸರು ಭದ್ರತೆ ನೀಡಿದ್ದಾರೆ ಎಂಬುದು ಗೊತ್ತಾಗಿದೆ.</p>.<p>ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ವೊಂದರಲ್ಲಿ ಸುಜಾತಾ ಭಟ್ ಅವರು ಮೂರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಅವರು, ಎರಡು ದಿನಗಳ ಹಿಂದಷ್ಟೇ ನಗರಕ್ಕೆ ಬಂದು ಬನಶಂಕರಿಯ ಮನೆಯಲ್ಲಿ ವಾಸ್ತವ್ಯ ಮಾಡಿದ್ದಾರೆ. </p>.<p>ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಬಿಎನ್ಎಸ್ 131 ಸೆಕ್ಷನ್ನಡಿ ಸುಜಾತಾ ಅವರಿಗೆ ಎಸ್ಐಟಿ ನೋಟಿಸ್ ಜಾರಿ ಮಾಡಿದ್ದು, ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಯ್ದೆ ಅನ್ವಯ ದೂರುದಾರರು ಅಥವಾ ಸಾಕ್ಷಿದಾರರು 60 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಅಥವಾ 18 ವರ್ಷದ ಒಳಗಿನವರಾಗಿದ್ದರೆ ತನಿಖಾಧಿಕಾರಿಗಳೇ ಅವರ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ಅವಕಾಶ ಇದೆ. ಅನಾರೋಗ್ಯದ ಕಾರಣ ನೀಡಿ ಸುಜಾತಾ ಅವರು ಈ ಹಿಂದೆ ವಿಚಾರಣೆಗೆ ಗೈರಾಗಿದ್ದರು. ಪ್ರಕರಣದ ತನಿಖೆ ಚುರುಕಾಗಿದ್ದು, ಸದ್ಯದಲ್ಲೇ ಹೇಳಿಕೆ ದಾಖಲು ಮಾಡಿಕೊಳ್ಳಲಾಗುವುದು. ಸುಜಾತಾ ಭಟ್ ಅವರು ಮಾಧ್ಯಮಗಳ ಎದುರು ವಿಭಿನ್ನ ಹೇಳಿಕೆ ನೀಡಿದ್ದಾರೆ. ದೂರಿನಲ್ಲೇ ಬೇರೆ ರೀತಿಯಲ್ಲಿ ಉಲ್ಲೇಖಿಸಿದ್ದರು. ಎಲ್ಲವನ್ನೂ ಪರಿಶೀಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<p>‘ಅನನ್ಯಾ ಭಟ್ ನನ್ನ ಮಗಳು ಅಲ್ಲ. ಈ ಬಗ್ಗೆ ಕಥೆ ಕಟ್ಟಿದ್ದೇನೆ’ ಎಂದು ಹೇಳಿದ್ದರು. ಅದಾದ ಮೇಲೆ, ‘ಅನನ್ಯಾ ನನ್ನ ಮಗಳು. ಕಾರಿನೊಳಗೆ ತುರುಕಿ ಸಂದರ್ಶನದ ವೇಳೆ ಬೆದರಿಸಿ ನನ್ನ ಕಡೆಯಿಂದ ಹೇಳಿಕೆ ಕೊಡಿಸಿದ್ದಾರೆ’ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>