<p><strong>ಬೆಂಗಳೂರು:</strong> ‘ನಿಯಮಿತ ಆಹಾರ ಹಾಗೂ ವ್ಯಾಯಾಮ, ಉತ್ತಮ ಜೀವನಶೈಲಿ ಹಾಗೂ ಆರೋಗ್ಯ ತಪಾಸಣೆಗೆ ಒತ್ತು ನೀಡುವುದರಿಂದ ಮಧುಮೇಹದ ಅಪಾಯದಿಂದ ಪಾರಾಗಬಹುದು’ ಎಂದು ನಟ ದತ್ತಣ್ಣ ಸಲಹೆ ನೀಡಿದರು.</p>.<p>ಮಧುಮೇಹ ಜಾಗೃತಿಗಾಗಿ ರೋಟರಿ ಬೆಂಗಳೂರು ಶಂಕರ ಪಾರ್ಕ್ ಮತ್ತು ರೋಟರಿ ಸ್ಪಂದನ ಸಂಯುಕ್ತವಾಗಿ ಆಯೋಜಿಸಿದ್ದ ವಾಕಥಾನ್ನಲ್ಲಿ ಅವರು ಮಾತನಾಡಿದರು.</p>.<p>ರೋಟರಿ ಜಿಲ್ಲಾ ಗವರ್ನರ್ ಶ್ರೀಧರ್ ಮಾತನಾಡಿ, ‘ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನಗಳು ಹೆಚ್ಚುತ್ತಿರುವುದು ಶ್ಲಾಘನೀಯ. ರೋಟರಿ ಸಂಸ್ಥೆಯೂ ಕೈ ಜೋಡಿಸಿರುವುದರಿಂದ ಹೆಚ್ಚಿನ ಜನರಿಗೆ ಇದರ ಉಪಯೋಗ ಸಿಗಲಿದೆ’ ಎಂದು ಹೇಳಿದರು.</p>.<p>ಎನ್ಸ್ಟ್ರೈಡ್, ಐಎಂಎ ಹಾಗೂ ರಂಗಾದೊರೆ ಮೆಮೋರಿಯಲ್ ಆಸ್ಪತ್ರೆ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಧುಮೇಹ ತಪಾಸಣೆ, ಸಲಹೆ ಹಾಗೂ ಆರೋಗ್ಯ ಮಾರ್ಗದರ್ಶನವನ್ನು ತಜ್ಞರು ನೀಡಿದರು.</p>.<p>ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸೃಜನ ಸಾಂಸ್ಕೃತಿಕ ಸಮೂಹ, ನ್ಯಾಷನಲ್ ಇಂಗ್ಲಿಷ್ ಸ್ಕೂಲ್, ಬಸವನಗುಡಿ ನ್ಯಾಷನಲ್ ಕಾಲೇಜು, ವಿಶ್ವ ಸಾಯಿ ನರ್ಸಿಂಗ್ ಕಾಲೇಜು ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಿಯಮಿತ ಆಹಾರ ಹಾಗೂ ವ್ಯಾಯಾಮ, ಉತ್ತಮ ಜೀವನಶೈಲಿ ಹಾಗೂ ಆರೋಗ್ಯ ತಪಾಸಣೆಗೆ ಒತ್ತು ನೀಡುವುದರಿಂದ ಮಧುಮೇಹದ ಅಪಾಯದಿಂದ ಪಾರಾಗಬಹುದು’ ಎಂದು ನಟ ದತ್ತಣ್ಣ ಸಲಹೆ ನೀಡಿದರು.</p>.<p>ಮಧುಮೇಹ ಜಾಗೃತಿಗಾಗಿ ರೋಟರಿ ಬೆಂಗಳೂರು ಶಂಕರ ಪಾರ್ಕ್ ಮತ್ತು ರೋಟರಿ ಸ್ಪಂದನ ಸಂಯುಕ್ತವಾಗಿ ಆಯೋಜಿಸಿದ್ದ ವಾಕಥಾನ್ನಲ್ಲಿ ಅವರು ಮಾತನಾಡಿದರು.</p>.<p>ರೋಟರಿ ಜಿಲ್ಲಾ ಗವರ್ನರ್ ಶ್ರೀಧರ್ ಮಾತನಾಡಿ, ‘ಮಧುಮೇಹದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನಗಳು ಹೆಚ್ಚುತ್ತಿರುವುದು ಶ್ಲಾಘನೀಯ. ರೋಟರಿ ಸಂಸ್ಥೆಯೂ ಕೈ ಜೋಡಿಸಿರುವುದರಿಂದ ಹೆಚ್ಚಿನ ಜನರಿಗೆ ಇದರ ಉಪಯೋಗ ಸಿಗಲಿದೆ’ ಎಂದು ಹೇಳಿದರು.</p>.<p>ಎನ್ಸ್ಟ್ರೈಡ್, ಐಎಂಎ ಹಾಗೂ ರಂಗಾದೊರೆ ಮೆಮೋರಿಯಲ್ ಆಸ್ಪತ್ರೆ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಧುಮೇಹ ತಪಾಸಣೆ, ಸಲಹೆ ಹಾಗೂ ಆರೋಗ್ಯ ಮಾರ್ಗದರ್ಶನವನ್ನು ತಜ್ಞರು ನೀಡಿದರು.</p>.<p>ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸೃಜನ ಸಾಂಸ್ಕೃತಿಕ ಸಮೂಹ, ನ್ಯಾಷನಲ್ ಇಂಗ್ಲಿಷ್ ಸ್ಕೂಲ್, ಬಸವನಗುಡಿ ನ್ಯಾಷನಲ್ ಕಾಲೇಜು, ವಿಶ್ವ ಸಾಯಿ ನರ್ಸಿಂಗ್ ಕಾಲೇಜು ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>