ಪ್ರತಿಷ್ಠಾನದ ಸಂಸ್ಥಾಪನಾ ಮುಖ್ಯಸ್ಥ ಕೆ.ಎಸ್.ನವೀನ್,‘ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ಕಾಯಿಲೆ ಉಳ್ಳವರ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ವರದಿಯೊಂದರ ಪ್ರಕಾರ ರಾಜ್ಯದ 3ಲಕ್ಷಕ್ಕೂ ಅಧಿಕ ಮಕ್ಕಳಲ್ಲಿ ಮಧುಮೇಹ ಪತ್ತೆಯಾಗಿದೆ. ಇದರ ಚಿಕಿತ್ಸಾ ವೆಚ್ಚ ದುಬಾರಿಯಾಗಿದ್ದು, ಬಡವರಿಗೆ ಹೊರೆಯಾಗುತ್ತಿದೆ. ಚಿಕಿತ್ಸೆಗೆ ಸರ್ಕಾರದಿಂದಲೇ ನೆರವು ನೀಡಬೇಕು’ ಎಂದು ಒತ್ತಾಯಿಸಿದರು.