<p><strong>ಬೆಂಗಳೂರು</strong>: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಬಾಕಿ ವೇತನವನ್ನು ಎರಡು ವಾರದೊಳಗೆ ಪಾವತಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಸಿಬ್ಬಂದಿ ಮುಷ್ಕರದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.</p><p>ಇಲ್ಲಿನ ಆರೋಗ್ಯ ಸೌಧದಲ್ಲಿ ಡಯಾಲಿಸಿಸ್ ಕೇಂದ್ರದ ಪ್ರತಿನಿಧಿಗಳ ಜತೆಗೆ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು.</p><p>‘ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿರುವ ಸಂಸ್ಥೆಯು ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ಅಲ್ಲದೇ, ಹೆಚ್ಚುವರಿ ಭತ್ಯೆಗಳು ವರ್ಷದಿಂದ ಬಾಕಿಯಿದೆ. ಭವಿಷ್ಯನಿಧಿಯೂ ಪಾವತಿಯಾಗಿಲ್ಲ. ಸಮಸ್ಯೆ ನಿವಾರಣೆಯಾಗದಿದ್ದರೆ ಕಾರ್ಯ ಸ್ಥಗಿತಗೊಳಿಸಿ, ಮುಷ್ಕರ ಕೈಗೊಳ್ಳುವುದು ಅನಿವಾರ್ಯ’ ಎಂದು ಡಯಾಲಿಸಿಸ್ ಕೇಂದ್ರಗಳ ಪ್ರತಿನಿಧಿಗಳು ತಿಳಿಸಿದರು.</p><p>ಇದಕ್ಕೆ ಸ್ಪಂದಿಸಿದ ದಿನೇಶ್ ಗುಂಡೂರಾವ್, ‘ಡಯಾಲಿಸಿಸ್ ಕೇಂದ್ರಗಳಲ್ಲಿ ಸೇವೆ ಸ್ಥಗಿತ ಆಗಬಾರದು. ಸಂಸ್ಥೆಯ ಜತೆಗೆ ಮಾತುಕತೆ ನಡೆಸಿ, ಬಾಕಿ ಇರುವ ವೇತನ ಪಾವತಿಗೆ ಕ್ರಮವಹಿಸಲಾಗುವುದು. ಈ ಬಗ್ಗೆ ಇಲಾಖೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡಿದ್ದೇನೆ. ಸಂಸ್ಥೆಯ ಗುತ್ತಿಗೆ ಮುಗಿದಿದ್ದರಿಂದ ವೇತನ ಪಾವತಿಯಲ್ಲಿ ಸಮಸ್ಯೆಯಾಗಿದೆ. ಈಗಿರುವ ಸಂಜೀವಿನಿ ಸಂಸ್ಥೆಯವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಹೇಳಿದರು.</p><p>‘ಈ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜತೆಗೂ ಚರ್ಚಿಸಲಾಗುವುದು. ಡಯಾಲಿಸಿಸ್ ಕೇಂದ್ರಗಳಲ್ಲಿ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗುವುದು’ ಎಂದು ಭರವಸೆ ನೀಡಿದರು.</p><p>‘ತಲಾ ₹ 2 ಸಾವಿರದಂತೆ ಡಿಸೆಂಬರ್ವರೆಗಿನ ಭತ್ಯೆಯನ್ನು ಕೊಡಿಸಲಾಗುವುದು. ಮೇ ಮತ್ತು ಜೂನ್ ತಿಂಗಳ ವೇತನ 15 ದಿನದೊಳಗೆ ಪಾವತಿಸಲಾಗುತ್ತದೆ. ಸಂಸ್ಥೆಯಿಂದ ಪಿಎಫ್ ಮತ್ತು ಇಎಸ್ಐ ಸೌಲಭ್ಯ ಒದಗಿಸುವ ಬಗ್ಗೆಯೂ ಮಾತುಕಡೆ ನಡೆಸಲಾಗಿದೆ’ ಎಂದರು.</p><p>ಇದರಿಂದಾಗಿ ಮುಷ್ಕರ ನಿರ್ಧಾರ ಕೈಬಿಟ್ಟು, ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವುದಾಗಿ ಡಯಾಲಿಸಿಸ್ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಬಾಕಿ ವೇತನವನ್ನು ಎರಡು ವಾರದೊಳಗೆ ಪಾವತಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಸಿಬ್ಬಂದಿ ಮುಷ್ಕರದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.</p><p>ಇಲ್ಲಿನ ಆರೋಗ್ಯ ಸೌಧದಲ್ಲಿ ಡಯಾಲಿಸಿಸ್ ಕೇಂದ್ರದ ಪ್ರತಿನಿಧಿಗಳ ಜತೆಗೆ ಸಭೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು.</p><p>‘ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿರುವ ಸಂಸ್ಥೆಯು ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ಅಲ್ಲದೇ, ಹೆಚ್ಚುವರಿ ಭತ್ಯೆಗಳು ವರ್ಷದಿಂದ ಬಾಕಿಯಿದೆ. ಭವಿಷ್ಯನಿಧಿಯೂ ಪಾವತಿಯಾಗಿಲ್ಲ. ಸಮಸ್ಯೆ ನಿವಾರಣೆಯಾಗದಿದ್ದರೆ ಕಾರ್ಯ ಸ್ಥಗಿತಗೊಳಿಸಿ, ಮುಷ್ಕರ ಕೈಗೊಳ್ಳುವುದು ಅನಿವಾರ್ಯ’ ಎಂದು ಡಯಾಲಿಸಿಸ್ ಕೇಂದ್ರಗಳ ಪ್ರತಿನಿಧಿಗಳು ತಿಳಿಸಿದರು.</p><p>ಇದಕ್ಕೆ ಸ್ಪಂದಿಸಿದ ದಿನೇಶ್ ಗುಂಡೂರಾವ್, ‘ಡಯಾಲಿಸಿಸ್ ಕೇಂದ್ರಗಳಲ್ಲಿ ಸೇವೆ ಸ್ಥಗಿತ ಆಗಬಾರದು. ಸಂಸ್ಥೆಯ ಜತೆಗೆ ಮಾತುಕತೆ ನಡೆಸಿ, ಬಾಕಿ ಇರುವ ವೇತನ ಪಾವತಿಗೆ ಕ್ರಮವಹಿಸಲಾಗುವುದು. ಈ ಬಗ್ಗೆ ಇಲಾಖೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡಿದ್ದೇನೆ. ಸಂಸ್ಥೆಯ ಗುತ್ತಿಗೆ ಮುಗಿದಿದ್ದರಿಂದ ವೇತನ ಪಾವತಿಯಲ್ಲಿ ಸಮಸ್ಯೆಯಾಗಿದೆ. ಈಗಿರುವ ಸಂಜೀವಿನಿ ಸಂಸ್ಥೆಯವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಹೇಳಿದರು.</p><p>‘ಈ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜತೆಗೂ ಚರ್ಚಿಸಲಾಗುವುದು. ಡಯಾಲಿಸಿಸ್ ಕೇಂದ್ರಗಳಲ್ಲಿ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗುವುದು’ ಎಂದು ಭರವಸೆ ನೀಡಿದರು.</p><p>‘ತಲಾ ₹ 2 ಸಾವಿರದಂತೆ ಡಿಸೆಂಬರ್ವರೆಗಿನ ಭತ್ಯೆಯನ್ನು ಕೊಡಿಸಲಾಗುವುದು. ಮೇ ಮತ್ತು ಜೂನ್ ತಿಂಗಳ ವೇತನ 15 ದಿನದೊಳಗೆ ಪಾವತಿಸಲಾಗುತ್ತದೆ. ಸಂಸ್ಥೆಯಿಂದ ಪಿಎಫ್ ಮತ್ತು ಇಎಸ್ಐ ಸೌಲಭ್ಯ ಒದಗಿಸುವ ಬಗ್ಗೆಯೂ ಮಾತುಕಡೆ ನಡೆಸಲಾಗಿದೆ’ ಎಂದರು.</p><p>ಇದರಿಂದಾಗಿ ಮುಷ್ಕರ ನಿರ್ಧಾರ ಕೈಬಿಟ್ಟು, ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವುದಾಗಿ ಡಯಾಲಿಸಿಸ್ ಸಿಬ್ಬಂದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>