<p><strong>ರಾಜರಾಜೇಶ್ವರಿ ನಗರ:</strong> ನಾಗರಿಕರಿಗೆ ಗುಣಮಟ್ಟದ ಅಗತ್ಯ ಸೌಲಭ್ಯವುಳ್ಳ ಸುಸಜ್ಜಿತ 250 ಹಾಸಿಗೆಯುಳ್ಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಯಶವಂತಪುರ ಕ್ಷೇತ್ರದ ಉಲ್ಲಾಳುವಿನಲ್ಲಿ ₹209 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಯುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಭರತ್ ನಗರದಲ್ಲಿ ಡಯಾಲಿಸಿಸ್ ಸೆಂಟರ್ ವೀಕ್ಷಿಸಿ, ಉಚಿತ ಆಂಬುಲೆನ್ಸ್ ವಾಹನವನ್ನು ಜನಾರ್ಪಣೆ ಮಾಡಿದ ಅವರು, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಅನುಕೂಲ ಮಾಡಿಕೊಡಲು ಅಗತ್ಯ ಕಂಡುಬಂದರೆ ಇನ್ನು ಹೆಚ್ಚಿನ ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು ಎಂದರು.</p>.<p>ಕೆಂಗೇರಿ ಉಪನಗರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲ ನಕ್ಷೆ ತಯಾರಾಗಿದೆ. ಶೀಘ್ರದಲ್ಲಿಯೇ ₹11ಕೋಟಿ ವೆಚ್ಚದಲ್ಲಿ ಕ್ಷೇತ್ರದ ಮೂರು ಕಡೆ ಡಯಾಲಿಸಿಸ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.</p>.<p>ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಒಂದೇ ಕಟ್ಟಡದಲ್ಲಿ ನುರಿತ ವೈದ್ಯರಿಂದ ಎಲ್ಲಾ ಚಿಕಿತ್ಸೆಯನ್ನು ದೊರಕಿಸಿಕೊಡಲಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ನಾಗರಿಕರಿಗೆ ಗುಣಮಟ್ಟದ ಅಗತ್ಯ ಸೌಲಭ್ಯವುಳ್ಳ ಸುಸಜ್ಜಿತ 250 ಹಾಸಿಗೆಯುಳ್ಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಯಶವಂತಪುರ ಕ್ಷೇತ್ರದ ಉಲ್ಲಾಳುವಿನಲ್ಲಿ ₹209 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಯುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಭರತ್ ನಗರದಲ್ಲಿ ಡಯಾಲಿಸಿಸ್ ಸೆಂಟರ್ ವೀಕ್ಷಿಸಿ, ಉಚಿತ ಆಂಬುಲೆನ್ಸ್ ವಾಹನವನ್ನು ಜನಾರ್ಪಣೆ ಮಾಡಿದ ಅವರು, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಅನುಕೂಲ ಮಾಡಿಕೊಡಲು ಅಗತ್ಯ ಕಂಡುಬಂದರೆ ಇನ್ನು ಹೆಚ್ಚಿನ ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು ಎಂದರು.</p>.<p>ಕೆಂಗೇರಿ ಉಪನಗರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲ ನಕ್ಷೆ ತಯಾರಾಗಿದೆ. ಶೀಘ್ರದಲ್ಲಿಯೇ ₹11ಕೋಟಿ ವೆಚ್ಚದಲ್ಲಿ ಕ್ಷೇತ್ರದ ಮೂರು ಕಡೆ ಡಯಾಲಿಸಿಸ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.</p>.<p>ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಒಂದೇ ಕಟ್ಟಡದಲ್ಲಿ ನುರಿತ ವೈದ್ಯರಿಂದ ಎಲ್ಲಾ ಚಿಕಿತ್ಸೆಯನ್ನು ದೊರಕಿಸಿಕೊಡಲಾಗುತ್ತದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>