ಕರುಣಾಮೂರ್ತಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿತ್ತು. ಅವರಿಗೆ ಬಿಬಿಎಂಪಿ ಪೂರ್ವ ವಲಯದ ಅಧಿಕಾರಿಗಳು ಬಿ.ಯು.ನಂಬರ್ ಒದಗಿಸಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಸಿಗೆ ಕಾಯ್ದಿರಿಸಿದ್ದರು. ಅಲ್ಲಿಗೆ ಹೋಗುವಷ್ಟರಲ್ಲಿ ಕರುಣಾಮೂರ್ತಿ ಅವರ ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಶೇ 70ಕ್ಕಿಂತ ಕಡಿಮೆ ಆಗಿತ್ತು. ಅಮ್ಲಜನಕ ಪೂರಣ ವ್ಯವಸ್ಥೆಯ ಹಾಸಿಗೆ ಲಭ್ಯ ಇಲ್ಲದ ಕಾರಣ ಕಿಮ್ಸ್ನವರು ಅವರನ್ನು ಬೇರೆ ಕಡೆ ಕರೆದೊಯ್ಯುವಂತೆ ಸೂಚಿಸಿದರು. ಅವರನ್ನು ಬೇರೆ ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಮುಂದಾದರು.