<p><strong>ಬೆಂಗಳೂರು</strong>: ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಕರೆ ಮಾಡಿದ್ದ ಸೈಬರ್ ವಂಚಕನೊಬ್ಬ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ ದೈಹಿಕ ತಪಾಸಣೆ ನೆಪದಲ್ಲಿ ಸ್ನೇಹಿತೆಯರನ್ನು ವಿವಸ್ತ್ರಗೊಳಿಸಿ ಕಿರುಕುಳ ನೀಡಿದ್ದು, ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p>.<p>ಸಂತ್ರಸ್ತೆಯರು ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡುವ ಜತೆಗೆ ಅವರ ಬ್ಯಾಂಕ್ ಖಾತೆಯಿಂದ ₹58,477 ಹಣವನ್ನೂ ವಂಚಕ ವರ್ಗಾಯಿಸಿಕೊಂಡಿದ್ದಾನೆ. ಒಂಬತ್ತು ತಾಸು ವಂಚಕ ಕಿರುಕುಳ ನೀಡಿದ್ದ ಎಂದು ಸಂತ್ರಸ್ತೆಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಥಾಯ್ಲೆಂಡ್ನಲ್ಲಿ ಬೋಧಕಿಯಾಗಿರುವ ಮಹಿಳೆ, ತನ್ನ ಬಾಲ್ಯ ಸ್ನೇಹಿತೆಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಸ್ನೇಹಿತೆಯ ಮನೆಯಲ್ಲಿ ತಂಗಿದ್ದ ಮಹಿಳೆಗೆ ಜುಲೈ 17ರಂದು ಬೆಳಿಗ್ಗೆ 11ರ ಸುಮಾರಿಗೆ ಅನಾಮಧೇಯ ನಂಬರ್ನಿಂದ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ತಾನು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ‘ಜೆಟ್ ಏರ್ವೇಸ್’ಗೆ ಸಂಬಂಧಿಸಿದ ಹಣ ವರ್ಗಾವಣೆಯಲ್ಲಿ ತಾವು ಭಾಗಿಯಾಗಿದ್ದೀರಿ’ ಎಂದು ಆರೋಪಿಸಿದ್ದ. ಅಲ್ಲದೇ ಅಕ್ರಮ ಹಣ ವರ್ಗಾವಣೆ, ಕಳ್ಳಸಾಗಣೆ ಹಾಗೂ ಹತ್ಯೆ ಪ್ರಕರಣದಲ್ಲೂ ತಮ್ಮ ಹೆಸರಿದೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳು ತಮ್ಮ ಬಳಿಯಿವೆ ಎಂದು ಹೇಳಿದ್ದ. ಇದರಿಂದ ಆಘಾತಕ್ಕೆ ಒಳಗಾದ ಮಹಿಳೆ, ತಾನು ಕೆಲವು ದಿನಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡಿದ್ದೇನೆ. ಆ ಪ್ರಕರಣಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ವಿವರಿಸಿದ್ದರು. ಮಹಿಳೆಯ ಡೆಬಿಟ್ ಕಾರ್ಡ್ ನಂಬರ್ ಅನ್ನು ಸರಿಯಾಗಿ ಹೇಳಿದ್ದ ಆರೋಪಿ, ಇಬ್ಬರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p><strong>ಬಂಧನದ ವಾರಂಟ್ ಕಳುಹಿಸಿ ಬೆದರಿಕೆ:</strong> ‘ಅದಾದ ಕೆಲವೇ ಹೊತ್ತಿನಲ್ಲಿ ಮಹಿಳೆಯರಿಗೆ ನಕಲಿ ಬಂಧನದ ವಾರಂಟ್ ಕಳುಹಿಸಿದ್ದ ವಂಚಕ, ಬ್ಯಾಂಕ್ ಖಾತೆಗಳಲ್ಲಿರುವ ಹಣವನ್ನು ವರ್ಗಾವಣೆ ಮಾಡುವಂತೆಯೂ ಬೆದರಿಕೆ ಹಾಕಿದ್ದ. ಹೆದರಿದ ಮಹಿಳೆಯರು, ₹58,477 ಅನ್ನು ಆರೋಪಿ ಹೇಳಿದ್ದ ಖಾತೆಗೆ ಹಾಕಿದ್ದರು. ಈ ಪ್ರಕರಣದಿಂದ ಕೈಬಿಡಬೇಕಾದರೆ ದೈಹಿಕ ತಪಾಸಣೆ ನಡೆಸುವುದು ಅಗತ್ಯವಿದೆ ಎಂದು ಹೇಳಿ ವಿವಸ್ತ್ರಗೊಳ್ಳುವಂತೆ ಒತ್ತಾಯಿಸಿದ್ದ. ಮೈಮೇಲಿರುವ ಮಚ್ಚೆ ಅಥವಾ ಗುರುತುಗಳನ್ನು ತೋರಿಸುವಂತೆ ಸೂಚಿಸಿದ್ದ. ಸಂತ್ರಸ್ತೆಯರು ವಿವಸ್ತ್ರಗೊಂಡಿದ್ದರು’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಕರೆ ಮಾಡಿದ್ದ ಸೈಬರ್ ವಂಚಕನೊಬ್ಬ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ ದೈಹಿಕ ತಪಾಸಣೆ ನೆಪದಲ್ಲಿ ಸ್ನೇಹಿತೆಯರನ್ನು ವಿವಸ್ತ್ರಗೊಳಿಸಿ ಕಿರುಕುಳ ನೀಡಿದ್ದು, ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. </p>.<p>ಸಂತ್ರಸ್ತೆಯರು ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318(4) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡುವ ಜತೆಗೆ ಅವರ ಬ್ಯಾಂಕ್ ಖಾತೆಯಿಂದ ₹58,477 ಹಣವನ್ನೂ ವಂಚಕ ವರ್ಗಾಯಿಸಿಕೊಂಡಿದ್ದಾನೆ. ಒಂಬತ್ತು ತಾಸು ವಂಚಕ ಕಿರುಕುಳ ನೀಡಿದ್ದ ಎಂದು ಸಂತ್ರಸ್ತೆಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಥಾಯ್ಲೆಂಡ್ನಲ್ಲಿ ಬೋಧಕಿಯಾಗಿರುವ ಮಹಿಳೆ, ತನ್ನ ಬಾಲ್ಯ ಸ್ನೇಹಿತೆಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಸ್ನೇಹಿತೆಯ ಮನೆಯಲ್ಲಿ ತಂಗಿದ್ದ ಮಹಿಳೆಗೆ ಜುಲೈ 17ರಂದು ಬೆಳಿಗ್ಗೆ 11ರ ಸುಮಾರಿಗೆ ಅನಾಮಧೇಯ ನಂಬರ್ನಿಂದ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ತಾನು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ‘ಜೆಟ್ ಏರ್ವೇಸ್’ಗೆ ಸಂಬಂಧಿಸಿದ ಹಣ ವರ್ಗಾವಣೆಯಲ್ಲಿ ತಾವು ಭಾಗಿಯಾಗಿದ್ದೀರಿ’ ಎಂದು ಆರೋಪಿಸಿದ್ದ. ಅಲ್ಲದೇ ಅಕ್ರಮ ಹಣ ವರ್ಗಾವಣೆ, ಕಳ್ಳಸಾಗಣೆ ಹಾಗೂ ಹತ್ಯೆ ಪ್ರಕರಣದಲ್ಲೂ ತಮ್ಮ ಹೆಸರಿದೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳು ತಮ್ಮ ಬಳಿಯಿವೆ ಎಂದು ಹೇಳಿದ್ದ. ಇದರಿಂದ ಆಘಾತಕ್ಕೆ ಒಳಗಾದ ಮಹಿಳೆ, ತಾನು ಕೆಲವು ದಿನಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡಿದ್ದೇನೆ. ಆ ಪ್ರಕರಣಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ವಿವರಿಸಿದ್ದರು. ಮಹಿಳೆಯ ಡೆಬಿಟ್ ಕಾರ್ಡ್ ನಂಬರ್ ಅನ್ನು ಸರಿಯಾಗಿ ಹೇಳಿದ್ದ ಆರೋಪಿ, ಇಬ್ಬರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p><strong>ಬಂಧನದ ವಾರಂಟ್ ಕಳುಹಿಸಿ ಬೆದರಿಕೆ:</strong> ‘ಅದಾದ ಕೆಲವೇ ಹೊತ್ತಿನಲ್ಲಿ ಮಹಿಳೆಯರಿಗೆ ನಕಲಿ ಬಂಧನದ ವಾರಂಟ್ ಕಳುಹಿಸಿದ್ದ ವಂಚಕ, ಬ್ಯಾಂಕ್ ಖಾತೆಗಳಲ್ಲಿರುವ ಹಣವನ್ನು ವರ್ಗಾವಣೆ ಮಾಡುವಂತೆಯೂ ಬೆದರಿಕೆ ಹಾಕಿದ್ದ. ಹೆದರಿದ ಮಹಿಳೆಯರು, ₹58,477 ಅನ್ನು ಆರೋಪಿ ಹೇಳಿದ್ದ ಖಾತೆಗೆ ಹಾಕಿದ್ದರು. ಈ ಪ್ರಕರಣದಿಂದ ಕೈಬಿಡಬೇಕಾದರೆ ದೈಹಿಕ ತಪಾಸಣೆ ನಡೆಸುವುದು ಅಗತ್ಯವಿದೆ ಎಂದು ಹೇಳಿ ವಿವಸ್ತ್ರಗೊಳ್ಳುವಂತೆ ಒತ್ತಾಯಿಸಿದ್ದ. ಮೈಮೇಲಿರುವ ಮಚ್ಚೆ ಅಥವಾ ಗುರುತುಗಳನ್ನು ತೋರಿಸುವಂತೆ ಸೂಚಿಸಿದ್ದ. ಸಂತ್ರಸ್ತೆಯರು ವಿವಸ್ತ್ರಗೊಂಡಿದ್ದರು’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>