<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ವಸ್ತು ಸಂಗ್ರಹಾಲಯದ ಅಭಿವೃದ್ಧಿ ಕುರಿತಂತೆ ಕೆಂಪೇಗೌಡ ವಸ್ತು ಸಂಗ್ರಹಾಲಯ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮೇಯರ್ ಆರ್.ಸಂಪತ್ರಾಜ್ ಮಂಗಳವಾರ ಸಭೆ ನಡೆಸಿದರು.</p>.<p>‘ಕೆಂಪೇಗೌಡರ ಇತಿಹಾಸ ಮತ್ತು ಸಾಧನೆಗಳ ಕುರಿತು ತಿಳಿಸಲು ಹಾಗೂ ಸಂಗ್ರಹಾಲಯವನ್ನು ಡಿಜಿಟಲ್ ರೂಪದಲ್ಲಿ ತರಲು ₹7.50 ಕೋಟಿ ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಿ ಟೆಂಡರ್ ಕರೆಯಲಾಗಿದೆ. ಐದು ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುತ್ತದೆ’ ಎಂದು ಅವರು ಹೇಳಿದರು. ಸಂಗ್ರಹಾಲಯದ ಅಭಿವೃದ್ಧಿ ಕುರಿತಂತೆ ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದು ಅವರು ಸೂಚಿಸಿದರು.</p>.<p>ಸಂಗ್ರಹಾಲಯದ ಮೊದಲ ಮಹಡಿಯಲ್ಲಿ ಕೆಂಪೇಗೌಡರ ಸಾಧನೆ ತಿಳಿಸಲು ಡಿಜಿಟಲ್ ಲೈಟಿಂಗ್ ಮೂಲಕ 20 ನಿಮಿಷಗಳ ವಿಡಿಯೊ ಚಿತ್ರ, 3 ಡಿ ಮಾದರಿಯಲ್ಲಿ ಬಯಲು ರಂಗಮಂದಿರ ಹಾಗೂ ಪರಂಪರೆಯ ಗೋಡೆ ನಿರ್ಮಾಣ ಮಾಡಬೇಕು ಎಂದರು.</p>.<p>ಮ್ಯೂಸಿಯಂ ಅಭಿವೃದ್ಧಿ ಸಮಿತಿಯ ಸದಸ್ಯ ಚಿರಂಜೀವಿ ಸಿಂಗ್ ಮಾತನಾಡಿ, ‘ಪುರಾತತ್ವ ಇಲಾಖೆಯಿಂದ ಮ್ಯೂಸಿಯಂಗೆ ಐವರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಬೇಕು. ಡಿಜಿಟಲ್ ರೂಪ ಪಡೆದ ಬಳಿಕ ಇಲ್ಲಿ ಕೆಫೆಟೆರಿಯಾ ಆರಂಭಿಸಬೇಕು. ನಾಡಪ್ರಭುವಿನ ಕಾಲದ ಆಹಾರ ಪದ್ಧತಿಯನ್ನು ಇಲ್ಲಿ ಪರಿಚಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪಾಲಿಕೆಯ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ‘ಮಾಗಡಿ, ನೆಲಮಂಗಲ, ದೊಡ್ಡಬಳ್ಳಾಪುರ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಬೇಕು. ಮ್ಯೂಸಿಯಂಗೆ ಬರುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಮಾರ್ಗದರ್ಶಕರನ್ನು ನೇಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ವಸ್ತು ಸಂಗ್ರಹಾಲಯದ ಅಭಿವೃದ್ಧಿ ಕುರಿತಂತೆ ಕೆಂಪೇಗೌಡ ವಸ್ತು ಸಂಗ್ರಹಾಲಯ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮೇಯರ್ ಆರ್.ಸಂಪತ್ರಾಜ್ ಮಂಗಳವಾರ ಸಭೆ ನಡೆಸಿದರು.</p>.<p>‘ಕೆಂಪೇಗೌಡರ ಇತಿಹಾಸ ಮತ್ತು ಸಾಧನೆಗಳ ಕುರಿತು ತಿಳಿಸಲು ಹಾಗೂ ಸಂಗ್ರಹಾಲಯವನ್ನು ಡಿಜಿಟಲ್ ರೂಪದಲ್ಲಿ ತರಲು ₹7.50 ಕೋಟಿ ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಿ ಟೆಂಡರ್ ಕರೆಯಲಾಗಿದೆ. ಐದು ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುತ್ತದೆ’ ಎಂದು ಅವರು ಹೇಳಿದರು. ಸಂಗ್ರಹಾಲಯದ ಅಭಿವೃದ್ಧಿ ಕುರಿತಂತೆ ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದು ಅವರು ಸೂಚಿಸಿದರು.</p>.<p>ಸಂಗ್ರಹಾಲಯದ ಮೊದಲ ಮಹಡಿಯಲ್ಲಿ ಕೆಂಪೇಗೌಡರ ಸಾಧನೆ ತಿಳಿಸಲು ಡಿಜಿಟಲ್ ಲೈಟಿಂಗ್ ಮೂಲಕ 20 ನಿಮಿಷಗಳ ವಿಡಿಯೊ ಚಿತ್ರ, 3 ಡಿ ಮಾದರಿಯಲ್ಲಿ ಬಯಲು ರಂಗಮಂದಿರ ಹಾಗೂ ಪರಂಪರೆಯ ಗೋಡೆ ನಿರ್ಮಾಣ ಮಾಡಬೇಕು ಎಂದರು.</p>.<p>ಮ್ಯೂಸಿಯಂ ಅಭಿವೃದ್ಧಿ ಸಮಿತಿಯ ಸದಸ್ಯ ಚಿರಂಜೀವಿ ಸಿಂಗ್ ಮಾತನಾಡಿ, ‘ಪುರಾತತ್ವ ಇಲಾಖೆಯಿಂದ ಮ್ಯೂಸಿಯಂಗೆ ಐವರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಬೇಕು. ಡಿಜಿಟಲ್ ರೂಪ ಪಡೆದ ಬಳಿಕ ಇಲ್ಲಿ ಕೆಫೆಟೆರಿಯಾ ಆರಂಭಿಸಬೇಕು. ನಾಡಪ್ರಭುವಿನ ಕಾಲದ ಆಹಾರ ಪದ್ಧತಿಯನ್ನು ಇಲ್ಲಿ ಪರಿಚಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪಾಲಿಕೆಯ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ‘ಮಾಗಡಿ, ನೆಲಮಂಗಲ, ದೊಡ್ಡಬಳ್ಳಾಪುರ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಬೇಕು. ಮ್ಯೂಸಿಯಂಗೆ ಬರುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಮಾರ್ಗದರ್ಶಕರನ್ನು ನೇಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>