ಪಾಲಿಕೆಯ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ‘ಮಾಗಡಿ, ನೆಲಮಂಗಲ, ದೊಡ್ಡಬಳ್ಳಾಪುರ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಬೇಕು. ಮ್ಯೂಸಿಯಂಗೆ ಬರುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲು ಮಾರ್ಗದರ್ಶಕರನ್ನು ನೇಮಿಸಬೇಕು’ ಎಂದರು.