ಬೆಂಗಳೂರು: ನಿರಂತರ ಮಳೆಯಿಂದಾಗಿ ಜಗಜೀವನ್ರಾಮ್ (ಜೆ.ಜೆ) ನಗರ ಠಾಣೆ ಕಟ್ಟಡ ಶಿಥಿಲಗೊಂಡಿದ್ದು, ಕುಸಿದು ಬೀಳುವ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಠಾಣೆಯನ್ನು ಹೊಸ ಕಟ್ಟಡಕ್ಕೆ ಶುಕ್ರವಾರ ಸ್ಥಳಾಂತರಿಸಲಾಗಿದೆ.
‘ಹಳೇ ಕಟ್ಟಡದಲ್ಲಿ ಠಾಣೆ ಇತ್ತು. ಮಳೆಯಿಂದಾಗಿ ಕಟ್ಟಡದ ಕೆಲವೆಡೆ ಸೋರಲಾರಂಭಿಸಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಸಂಗಮ್ ವೃತ್ತದಲ್ಲಿರುವ ಬಿಬಿಎಂಪಿ ಕಟ್ಟಡಕ್ಕೆಸ್ಥಳಾಂತರಿಸಲಾಗಿದೆ. ಹೊಸ ಕಟ್ಟಡದಲ್ಲಿ ಶುಕ್ರವಾರದಿಂದಲೇ ಸಿಬ್ಬಂದಿ ಕೆಲಸ ಆರಂಭಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.