‘ಒಡೆಯರ್ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳು ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿವೆ. ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಕೈಗಾರಿಕೆ, ನೀರಾವರಿ, ಆರ್ಥಿಕ ಚಟುವಟಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ, ಸಮಾಜ ಸುಧಾರಣೆ, ಮಹಿಳಾ ಶಿಕ್ಷಣ ಹೀಗೆ ಎಲ್ಲ ಕ್ಷೇತ್ರಗಳ ಬೆಳವಣಿಗೆಗೂ ಅವರು ಅವಿರತ ದುಡಿದಿದ್ದಾರೆ. ಕನ್ನಂಬಾಡಿ ಅಣೆಕಟ್ಟು ನಿರ್ಮಿಸಲು ತಮ್ಮ ಕುಟುಂಬದ ಸ್ವಂತ ಬಂಗಾರವನ್ನು ಮಾರಾಟ ಮಾಡಿ ಹಣ ಹೊಂದಿಸಿದರೆಂಬ ಕೀರ್ತಿ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗಾಗಿ ಅವರು ಮಾಡಿದ ತ್ಯಾಗ ಯಾರು ಮರೆಯಲಾಗದ್ದು’ ಎಂದೂ ಅವರು ಹೇಳಿದ್ದಾರೆ.