‘ಏನಕೇನ ಪ್ರಕಾರೇಣ’ ಅಧಿಕಾರಕ್ಕೆ ಬರಬೇಕು ಎಂಬುದೇ ಕಾಂಗ್ರೆಸ್ ಮಂತ್ರವಾಗಿದೆ. ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲು ಹೆಣಗಾಡುತ್ತಿದ್ದಾರೆ. ಗೋವಾ, ರಾಜಸ್ಥಾನ, ಉತ್ತರ ಪ್ರದೇಶ, ಹಿಮಾಚಲ, ಈಶಾನ್ಯ ಭಾರತದ ರಾಜ್ಯಗಳಲ್ಲಿ ನಮ್ಮೆದರು ಮುಗ್ಗರಿಸಿದ್ದಾರೆ. ಈಗ ಕರ್ನಾಟಕದಲ್ಲಿಯೂ ಸೋಲುವ ಸರದಿ ಬಂದಿರುವುದರಿಂದ ಎಲ್ಲರೂ ದಡಬಡಾಯಿಸುತ್ತಿದ್ದಾರೆ’ ಎಂದು ಕುಹಕವಾಡಿದರು.