‘ಲಾಕ್ಡೌನ್ ಬಳಿಕ ರೈತರು ತಾವು ಬೆಳೆದ ಹಣ್ಣು ಹಾಗೂ ತರಕಾರಿಗಳನ್ನು ನಗರಕ್ಕೆ ತಂದು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಮನೆಯಿಂದ ಹೊರಗೆ ಹೋಗಲು ಜನರಿಗೂ ಭಯ. ಈ ಎರಡೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ನಾವೇ ಕೋಲಾರ, ಹೊಸಕೋಟೆ, ಮಾಲೂರು ಕಡೆಯ ರೈತರಿಂದ ಅವುಗಳನ್ನು ಖರೀದಿಸಿ ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದೇವೆ. ಜನರಿಗೂ ಮಿತ ದರದಲ್ಲಿ ತರಕಾರಿ ಸಿಗುವಂತೆ ನೋಡಿಕೊಳ್ಳುತ್ತಿದ್ದೇವೆ’ ಎಂದು ಶಿಲ್ಪಾ ಅಭಿಲಾಷ್ ‘ಪ್ರಜಾವಾಣಿ’ಗೆ ತಿಳಿಸಿದರು.