<p><strong>ಬೆಂಗಳೂರು: </strong>‘ರಾಜ್ಯದ ಕಾರಾಗೃಹಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವೈದ್ಯಕೀಯ ಅಧಿಕಾರಿಗಳು, ಮನೋವೈದ್ಯರು, ಫಾರ್ಮಾಸಿಸ್ಟ್ ಸೇರಿ 114 ಮಂಜೂರಾತಿ ಹುದ್ದೆಗಳಿದ್ದು, ಅದರಲ್ಲಿ 86 ಹುದ್ದೆಗಳು ಖಾಲಿ ಇವೆ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯನ್ನು ಕಾರಾಗೃಹಗಳಿಗೆ ವರ್ಗಾಯಿಸಲು ಸಾಧ್ಯವೇ ಎಂಬುದನ್ನು ಪರಿಗಣಿಸುವಂತೆ ನಿರ್ದೇಶನ ನೀಡಿತು. ‘ಕೈದಿಗಳ ನೈರ್ಮಲ್ಯ, ಕಾರಾಗೃಹಗಳ ದಟ್ಟಣೆ, ಕೈದಿಗಳಿಗೆ ಒದಗಿಸುವ ಆಹಾರ, ಕುಟುಂಬ ಸದಸ್ಯರು ಭೇಟಿಯಾಗಲು ಇರುವ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದೂ ಪೀಠ ತಿಳಿಸಿತು.</p>.<p>‘ಜೈಲಿನಲ್ಲಿ ಸದ್ಯ ಇರುವ ಸೌಲಭ್ಯಗಳ ವರದಿಯನ್ನು ಮಾದರಿ ಜೈಲಿನ ಕೈಪಿಡಿಯಲ್ಲಿನ ಮಾರ್ಗಸೂಚಿಗಳಿಗೆ ಹೋಲಿಸಿದರೆ ಹಲವು ನ್ಯೂನತೆಗಳಿರುವುದು ತಿಳಿಯುತ್ತದೆ. 6 ಕೈದಿಗಳಿಗೆ ಒಂದು ಶೌಚಾಲಯ ಮತ್ತು 10 ಕೈದಿಗಳಿಗೆ ಒಂದು ಸ್ನಾನಗೃಹ ಇರಬೇಕು. ಆದರೆ, ಬೆಂಗಳೂರು, ಮೈಸೂರು ಮತ್ತು ಕೋಲಾರ ಕಾರಾಗೃಹಗಳಲ್ಲಿ 15 ಕೈದಿಗಳಿಗೆ ಒಂದು ಸ್ನಾನಗೃಹ ಇದೆ ಎಂದು ವರದಿ ಹೇಳುತ್ತಿದೆ’ ಎಂದು ಪೀಠ ಹೇಳಿತು.</p>.<p>‘ಹೆಚ್ಚುವರಿಯಾಗಿ ಕಾರಾಗೃಹಗಳ ನಿರ್ಮಾಣದ ಪ್ರಸ್ತಾಪ ಸರ್ಕಾರದ ಮುಂದೆ ಇದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಸದ್ಯ ಇರುವ ಜೈಲುಗಳಲ್ಲಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಅನುಸರಣಾ ವರದಿ ಸಲ್ಲಿಸಬೇಕಾಗುತ್ತದೆ’ ಎಂದು ತಿಳಿಸಿತು. ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜ್ಯದ ಕಾರಾಗೃಹಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವೈದ್ಯಕೀಯ ಅಧಿಕಾರಿಗಳು, ಮನೋವೈದ್ಯರು, ಫಾರ್ಮಾಸಿಸ್ಟ್ ಸೇರಿ 114 ಮಂಜೂರಾತಿ ಹುದ್ದೆಗಳಿದ್ದು, ಅದರಲ್ಲಿ 86 ಹುದ್ದೆಗಳು ಖಾಲಿ ಇವೆ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯನ್ನು ಕಾರಾಗೃಹಗಳಿಗೆ ವರ್ಗಾಯಿಸಲು ಸಾಧ್ಯವೇ ಎಂಬುದನ್ನು ಪರಿಗಣಿಸುವಂತೆ ನಿರ್ದೇಶನ ನೀಡಿತು. ‘ಕೈದಿಗಳ ನೈರ್ಮಲ್ಯ, ಕಾರಾಗೃಹಗಳ ದಟ್ಟಣೆ, ಕೈದಿಗಳಿಗೆ ಒದಗಿಸುವ ಆಹಾರ, ಕುಟುಂಬ ಸದಸ್ಯರು ಭೇಟಿಯಾಗಲು ಇರುವ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದೂ ಪೀಠ ತಿಳಿಸಿತು.</p>.<p>‘ಜೈಲಿನಲ್ಲಿ ಸದ್ಯ ಇರುವ ಸೌಲಭ್ಯಗಳ ವರದಿಯನ್ನು ಮಾದರಿ ಜೈಲಿನ ಕೈಪಿಡಿಯಲ್ಲಿನ ಮಾರ್ಗಸೂಚಿಗಳಿಗೆ ಹೋಲಿಸಿದರೆ ಹಲವು ನ್ಯೂನತೆಗಳಿರುವುದು ತಿಳಿಯುತ್ತದೆ. 6 ಕೈದಿಗಳಿಗೆ ಒಂದು ಶೌಚಾಲಯ ಮತ್ತು 10 ಕೈದಿಗಳಿಗೆ ಒಂದು ಸ್ನಾನಗೃಹ ಇರಬೇಕು. ಆದರೆ, ಬೆಂಗಳೂರು, ಮೈಸೂರು ಮತ್ತು ಕೋಲಾರ ಕಾರಾಗೃಹಗಳಲ್ಲಿ 15 ಕೈದಿಗಳಿಗೆ ಒಂದು ಸ್ನಾನಗೃಹ ಇದೆ ಎಂದು ವರದಿ ಹೇಳುತ್ತಿದೆ’ ಎಂದು ಪೀಠ ಹೇಳಿತು.</p>.<p>‘ಹೆಚ್ಚುವರಿಯಾಗಿ ಕಾರಾಗೃಹಗಳ ನಿರ್ಮಾಣದ ಪ್ರಸ್ತಾಪ ಸರ್ಕಾರದ ಮುಂದೆ ಇದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಸದ್ಯ ಇರುವ ಜೈಲುಗಳಲ್ಲಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಅನುಸರಣಾ ವರದಿ ಸಲ್ಲಿಸಬೇಕಾಗುತ್ತದೆ’ ಎಂದು ತಿಳಿಸಿತು. ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>