ಯೋಜನೆ ಸ್ಥಗಿತಗೊಂಡಿರುವ ಅವಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಪರಿಹಾರವಾಗಿ ಆಹಾರ ಧಾನ್ಯವನ್ನು ಹೇಗೆ ವಿತರಿಸಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ವಿದ್ಯಾರ್ಥಿಗಳಿಗೆ ತೊಗರಿ ಬೇಳೆಯನ್ನು ಪೂರೈಸಿ, ಅಡುಗೆ
ವೆಚ್ಚವನ್ನು ನೀಡದೇ ಇರುವುದು ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಯಮಗಳ ಉಲ್ಲಂಘನೆಯಾಗುತ್ತದೆ. ಶಾಲಾ ತರಗತಿಗಳು ಇನ್ನೂ ಆರಂಭವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಹಾರ ಧಾನ್ಯ ನೈಜ ಫಲಾನುಭವಿಯನ್ನು ತಲುಪಲು ಸಾಧ್ಯವೇ ಎಂಬ ಅನುಮಾನಗಳಿವೆ. ಈ ಎಲ್ಲ ಅಂಶಗಳ ಬಗ್ಗೆಯೂ ಸರ್ಕಾರ ಸ್ಪಷ್ಟವಾದ ವಿವರಣೆಯೊಂದಿಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ವಿಭಾಗೀಯ ಪೀಠ ನಿರ್ದೇಶನ ನೀಡಿತು.