<p><strong>ಬೆಂಗಳೂರು:</strong> ‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾದ (ಕೋರ್ಟ್ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ಕೋರುವ ಮಾಹಿತಿಯನ್ನು ಎರಡು ವಾರಗಳಲ್ಲಿ ಒದಗಿಸಿ’ ಎಂದು ಹೈಕೋರ್ಟ್, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದೆ.</p>.<p>ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಸಂಬಂಧ ಹೈಕೋರ್ಟ್ 2013ರಲ್ಲಿ ದಾಖಲಿಸಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. </p>.<p>‘ಶಾಲೆ ಬಿಟ್ಟ ಮಕ್ಕಳ ಅಂಕಿಅಂಶ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಅಮೈಕಸ್ ಕ್ಯೂರಿ ಅವರಿಗೆ ನೀಡಿ’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.</p>.<p>‘ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ 24 ಸಾವಿರಕ್ಕೂ ಅಧಿಕ ಮಕ್ಕಳಲ್ಲಿ 21,407 ಮಕ್ಕಳನ್ನು ಗುರುತಿಸಲಾಗಿದೆ ಹಾಗೂ 6 ರಿಂದ 14 ವರ್ಷದ 17,266 ಮಕ್ಕಳನ್ನು ಶಾಲೆಗೆ ಮರಳಿ ದಾಖಲಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಕರಣದಲ್ಲಿ ಅಮೈಕಸ್ ಕ್ಯೂರಿಯಾದ (ಕೋರ್ಟ್ಗೆ ಸಹಕರಿಸುವ ವಕೀಲ) ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ಕೋರುವ ಮಾಹಿತಿಯನ್ನು ಎರಡು ವಾರಗಳಲ್ಲಿ ಒದಗಿಸಿ’ ಎಂದು ಹೈಕೋರ್ಟ್, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದೆ.</p>.<p>ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಸಂಬಂಧ ಹೈಕೋರ್ಟ್ 2013ರಲ್ಲಿ ದಾಖಲಿಸಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. </p>.<p>‘ಶಾಲೆ ಬಿಟ್ಟ ಮಕ್ಕಳ ಅಂಕಿಅಂಶ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಅಮೈಕಸ್ ಕ್ಯೂರಿ ಅವರಿಗೆ ನೀಡಿ’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.</p>.<p>‘ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ 24 ಸಾವಿರಕ್ಕೂ ಅಧಿಕ ಮಕ್ಕಳಲ್ಲಿ 21,407 ಮಕ್ಕಳನ್ನು ಗುರುತಿಸಲಾಗಿದೆ ಹಾಗೂ 6 ರಿಂದ 14 ವರ್ಷದ 17,266 ಮಕ್ಕಳನ್ನು ಶಾಲೆಗೆ ಮರಳಿ ದಾಖಲಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>