<p><strong>ಬೆಂಗಳೂರು:</strong> ತಮಗೆ ಬಡ್ತಿ ನೀಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p>.<p>ಸುನೀಲ್ ಕುಮಾರ್ ಅವರಿಗೆ ಎಡಿಜಿಪಿ ಹುದ್ದೆಯಿಂದ ಡಿಜಿಪಿ ಹುದ್ದೆಗೆ ಬಡ್ತಿ ನೀಡಿರುವ ಬೆನ್ನಲ್ಲೇ ರವೀಂದ್ರನಾಥ್ ಬುಧವಾರ ರಾತ್ರಿ ಡಿ.ಜಿ ಕಚೇರಿಯ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ರವೀಂದ್ರನಾಥ್ ಮತ್ತು ಸುನೀಲ್ ಕುಮಾರ್ ಒಂದೇ ಬ್ಯಾಚ್ನ (1989)ಐಪಿಎಸ್ ಅಧಿಕಾರಿಗಳು. ಆದರೆ, ರ್ಯಾಂಕಿಂಗ್ನಲ್ಲಿ ರವೀಂದ್ರನಾಥ್ ಅವರು ಕೊಂಚ ಮೇಲಿದ್ದಾರೆ. ಆದರೆ, ತಮ್ಮ ಹಿರಿತನ ಪರಿಗಣಿಸಿಲ್ಲ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.</p>.<p>ರವೀಂದ್ರನಾಥ್ ಕೆಲವು ಪ್ರಕರಣಗಳಲ್ಲಿ ಇಲಾಖಾ ತನಿಖೆಯನ್ನು ಎದುರಿಸುತ್ತಿದ್ದರು. ಆ ವಿಚಾರಣಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇತ್ತೀಚೆಗೆ ನೀಡಲಾಗಿತ್ತು. ಬಡ್ತಿಯ ವೇಳೆಯಲ್ಲಿ ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಬಡ್ತಿಗೆ ಜೇಷ್ಠತೆ ಮಾತ್ರ ಮಾನದಂಡವಾಗಿರುವುದಿಲ್ಲ. ಅದರ ಜತೆಗೆ ವೃತ್ತಿ ಜೀವನವನ್ನೂ ಪರಿಗಣಿಸಲಾಗುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರವೀಂದ್ರನಾಥ್, ‘ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದೇನೆ. ಡಿಜಿಪಿ ಹುದ್ದೆಗೆ ನನಗಿಂತ ಕಿರಿಯರಾದ ಸುನೀಲ್ ಕುಮಾರ್ ಅವರಿಗೆ ಬಡ್ತಿ ನೀಡಲಾಗಿದೆ. ನನ್ನ ಹಿರಿತನ ಪರಿಗಣಿಸಿಲ್ಲ. ಈ ವಿಷಯವನ್ನು ಸರ್ಕಾರದ ಮುಖ್ಯಕಾರ್ಯದರ್ಶಿಯವರ ಗಮನಕ್ಕೂ ತಂದಿದ್ದೇನೆ’ ಎಂದು ಹೇಳಿದ್ದಾರೆ.</p>.<p>2014 ರಲ್ಲಿ ನನ್ನ ಮೇಲೆ ಆಪಾದನೆಗಳನ್ನು ಹೊರಿಸಿ ಪ್ರಕರಣ ದಾಖಲಿಸಿದ್ದರು. ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ವಜಾ ಮಾಡಿತ್ತು. ಸದ್ಯಕ್ಕೆ ಯಾವುದೇ ಪ್ರಕರಣಗಳ ಬಗ್ಗೆ ಇಲಾಖಾ ತನಿಖೆ ನಡೆಯುತ್ತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ರಾಜೀನಾಮೆ ಪತ್ರ ಹಿಂಪಡೆಯುವಂತೆ ರವೀಂದ್ರನಾಥ್ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಮಗೆ ಬಡ್ತಿ ನೀಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p>.<p>ಸುನೀಲ್ ಕುಮಾರ್ ಅವರಿಗೆ ಎಡಿಜಿಪಿ ಹುದ್ದೆಯಿಂದ ಡಿಜಿಪಿ ಹುದ್ದೆಗೆ ಬಡ್ತಿ ನೀಡಿರುವ ಬೆನ್ನಲ್ಲೇ ರವೀಂದ್ರನಾಥ್ ಬುಧವಾರ ರಾತ್ರಿ ಡಿ.ಜಿ ಕಚೇರಿಯ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ರವೀಂದ್ರನಾಥ್ ಮತ್ತು ಸುನೀಲ್ ಕುಮಾರ್ ಒಂದೇ ಬ್ಯಾಚ್ನ (1989)ಐಪಿಎಸ್ ಅಧಿಕಾರಿಗಳು. ಆದರೆ, ರ್ಯಾಂಕಿಂಗ್ನಲ್ಲಿ ರವೀಂದ್ರನಾಥ್ ಅವರು ಕೊಂಚ ಮೇಲಿದ್ದಾರೆ. ಆದರೆ, ತಮ್ಮ ಹಿರಿತನ ಪರಿಗಣಿಸಿಲ್ಲ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.</p>.<p>ರವೀಂದ್ರನಾಥ್ ಕೆಲವು ಪ್ರಕರಣಗಳಲ್ಲಿ ಇಲಾಖಾ ತನಿಖೆಯನ್ನು ಎದುರಿಸುತ್ತಿದ್ದರು. ಆ ವಿಚಾರಣಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇತ್ತೀಚೆಗೆ ನೀಡಲಾಗಿತ್ತು. ಬಡ್ತಿಯ ವೇಳೆಯಲ್ಲಿ ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಬಡ್ತಿಗೆ ಜೇಷ್ಠತೆ ಮಾತ್ರ ಮಾನದಂಡವಾಗಿರುವುದಿಲ್ಲ. ಅದರ ಜತೆಗೆ ವೃತ್ತಿ ಜೀವನವನ್ನೂ ಪರಿಗಣಿಸಲಾಗುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರವೀಂದ್ರನಾಥ್, ‘ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದೇನೆ. ಡಿಜಿಪಿ ಹುದ್ದೆಗೆ ನನಗಿಂತ ಕಿರಿಯರಾದ ಸುನೀಲ್ ಕುಮಾರ್ ಅವರಿಗೆ ಬಡ್ತಿ ನೀಡಲಾಗಿದೆ. ನನ್ನ ಹಿರಿತನ ಪರಿಗಣಿಸಿಲ್ಲ. ಈ ವಿಷಯವನ್ನು ಸರ್ಕಾರದ ಮುಖ್ಯಕಾರ್ಯದರ್ಶಿಯವರ ಗಮನಕ್ಕೂ ತಂದಿದ್ದೇನೆ’ ಎಂದು ಹೇಳಿದ್ದಾರೆ.</p>.<p>2014 ರಲ್ಲಿ ನನ್ನ ಮೇಲೆ ಆಪಾದನೆಗಳನ್ನು ಹೊರಿಸಿ ಪ್ರಕರಣ ದಾಖಲಿಸಿದ್ದರು. ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ವಜಾ ಮಾಡಿತ್ತು. ಸದ್ಯಕ್ಕೆ ಯಾವುದೇ ಪ್ರಕರಣಗಳ ಬಗ್ಗೆ ಇಲಾಖಾ ತನಿಖೆ ನಡೆಯುತ್ತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ರಾಜೀನಾಮೆ ಪತ್ರ ಹಿಂಪಡೆಯುವಂತೆ ರವೀಂದ್ರನಾಥ್ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>