<p><strong>ಬೆಂಗಳೂರು: </strong>‘ತನಗೆ ಮನೆ ಮಾರುವುದಾಗಿ ಹೇಳಿ ಹಂತ ಹಂತವಾಗಿ ₹50 ಲಕ್ಷ ಹಣ ಪಡೆದಿದ್ದ ಮಹಿಳೆ ಈಗ ಬೇರೊಬ್ಬರಿಗೆ ಮನೆ ಮಾರಾಟ ಮಾಡಿದ್ದಾರೆ. ತನ್ನಿಂದ ಪಡೆದ ಹಣವನ್ನು ಈವರೆಗೂ ಹಿಂತಿರುಗಿಸಿಲ್ಲ’ ಎಂದು ಚಲನಚಿತ್ರ ನಿರ್ದೇಶಕ ನಾಗಶೇಖರ್ ಅವರು ರಾಜರಾಜೇಶ್ವರಿನಗರಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ದೂರಿನ ಆಧಾರದಲ್ಲಿ ಪೊಲೀಸರು ರಾಜರಾಜೇಶ್ವರಿ ನಗರ ನಿವಾಸಿಗಳಾದ ಮೀನಾ ಹಾಗೂ ರಾಜ್ಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಆರ್.ಆರ್.ನಗರದ ಜಯಣ್ಣ ಲೇಔಟ್ನಲ್ಲಿ ಮನೆ ಖರೀದಿಸಲು ನಾಗಶೇಖರ್ ನಿರ್ಧರಿಸಿದ್ದರು. ಮೀನಾ ಮನೆ ನೀಡಲು ಒಪ್ಪಿದ್ದರು. ₹2.70 ಕೋಟಿಗೆ ಮನೆ ಖರೀದಿಸುವ ಕುರಿತು ಮಾತುಕತೆ ನಡೆದಿತ್ತು. 2020ರ ಆಗಸ್ಟ್ನಲ್ಲಿ ಖರೀದಿ ಒಪ್ಪಂದ ಮಾಡಿಕೊಂಡಿದ್ದ ನಾಗಶೇಖರ್ ಹಂತ ಹಂತವಾಗಿ ಮೀನಾ ಖಾತೆಗೆ ₹50 ಲಕ್ಷ ವರ್ಗಾಯಿಸಿದ್ದರು’ ಎಂದು ಪೊಲೀಸರು ಹೇಳಿದ್ದರು.</p>.<p>‘ಖರೀದಿ ಒಪ್ಪಂದದ ಬಳಿಕ ಮಹಿಳೆಯು ಮತ್ತೊಬ್ಬರಿಗೆ ಮನೆ ಮಾರಿದ್ದಳು. ನಾಗಶೇಖರ್ ಅವರಿಂದ ಪಡೆದಿದ್ದ ಮೊತ್ತವನ್ನೂ ಹಿಂತಿರುಗಿಸಿರಲಿಲ್ಲ. ದೂರು ದಾಖಲಾದ ಕೂಡಲೇ ವಂಚಕರಿಬ್ಬರೂ ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ತನಗೆ ಮನೆ ಮಾರುವುದಾಗಿ ಹೇಳಿ ಹಂತ ಹಂತವಾಗಿ ₹50 ಲಕ್ಷ ಹಣ ಪಡೆದಿದ್ದ ಮಹಿಳೆ ಈಗ ಬೇರೊಬ್ಬರಿಗೆ ಮನೆ ಮಾರಾಟ ಮಾಡಿದ್ದಾರೆ. ತನ್ನಿಂದ ಪಡೆದ ಹಣವನ್ನು ಈವರೆಗೂ ಹಿಂತಿರುಗಿಸಿಲ್ಲ’ ಎಂದು ಚಲನಚಿತ್ರ ನಿರ್ದೇಶಕ ನಾಗಶೇಖರ್ ಅವರು ರಾಜರಾಜೇಶ್ವರಿನಗರಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ದೂರಿನ ಆಧಾರದಲ್ಲಿ ಪೊಲೀಸರು ರಾಜರಾಜೇಶ್ವರಿ ನಗರ ನಿವಾಸಿಗಳಾದ ಮೀನಾ ಹಾಗೂ ರಾಜ್ಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಆರ್.ಆರ್.ನಗರದ ಜಯಣ್ಣ ಲೇಔಟ್ನಲ್ಲಿ ಮನೆ ಖರೀದಿಸಲು ನಾಗಶೇಖರ್ ನಿರ್ಧರಿಸಿದ್ದರು. ಮೀನಾ ಮನೆ ನೀಡಲು ಒಪ್ಪಿದ್ದರು. ₹2.70 ಕೋಟಿಗೆ ಮನೆ ಖರೀದಿಸುವ ಕುರಿತು ಮಾತುಕತೆ ನಡೆದಿತ್ತು. 2020ರ ಆಗಸ್ಟ್ನಲ್ಲಿ ಖರೀದಿ ಒಪ್ಪಂದ ಮಾಡಿಕೊಂಡಿದ್ದ ನಾಗಶೇಖರ್ ಹಂತ ಹಂತವಾಗಿ ಮೀನಾ ಖಾತೆಗೆ ₹50 ಲಕ್ಷ ವರ್ಗಾಯಿಸಿದ್ದರು’ ಎಂದು ಪೊಲೀಸರು ಹೇಳಿದ್ದರು.</p>.<p>‘ಖರೀದಿ ಒಪ್ಪಂದದ ಬಳಿಕ ಮಹಿಳೆಯು ಮತ್ತೊಬ್ಬರಿಗೆ ಮನೆ ಮಾರಿದ್ದಳು. ನಾಗಶೇಖರ್ ಅವರಿಂದ ಪಡೆದಿದ್ದ ಮೊತ್ತವನ್ನೂ ಹಿಂತಿರುಗಿಸಿರಲಿಲ್ಲ. ದೂರು ದಾಖಲಾದ ಕೂಡಲೇ ವಂಚಕರಿಬ್ಬರೂ ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>