<p><strong>ಬೆಂಗಳೂರು</strong>: ಚಿತ್ರ ನಿರ್ದೇಶಕ ಪ್ರೇಮ್ ಅವರಿಂದ ₹4.50 ಲಕ್ಷ ಪಡೆದು ವಂಚಿಸಲಾಗಿದ್ದು, ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಗುಜರಾತ್ನ ವ್ಯಕ್ತಿಯ ವಿರುದ್ಧ ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>ಪ್ರೇಮ್ ಅವರ ವ್ಯವಸ್ಥಾಪಕ ದಶಾವರ ಚಂದ್ರು ಅವರು ನೀಡಿದ ದೂರು ಆಧರಿಸಿ ಗುಜರಾತ್ನ ವಘೇಲಾ ವನರಾಜ್ ಭಾಯ್ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ.</p>.<p>ಪ್ರೇಮ್ ಅವರು ಹೈನುಗಾರಿಕೆ ನಡೆಸಲು ಗುಜರಾತ್ ರಾಜ್ಯದಲ್ಲಿ ಎಮ್ಮೆಗಳನ್ನು ಖರೀದಿಸಲು ನಿರ್ಧರಿಸಿದ್ದರು. ಈ ನಡುವೆ ವಘೇಲಾ ವನರಾಜ್ ಭಾಯ್ ಎಂಬಾತನ ಪರಿಚಯವಾಗಿತ್ತು. ಎಮ್ಮೆಗಳ ಖರೀದಿ ಸಂಬಂಧ ವನರಾಜ್ ಜತೆ ಮಾತುಕತೆ ನಡೆಸಿದ್ದ ಪ್ರೇಮ್ ಅವರು, ಆತನಿಗೆ ಮುಂಗಡವಾಗಿ ಜುಲೈನಲ್ಲಿ ₹25 ಸಾವಿರ ಪಾವತಿಸಿದ್ದರು. ಬಳಿಕ ಆತನ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹ 4.50 ಲಕ್ಷ ವರ್ಗಾಯಿಸಿದ್ದರು ಎಂದು ದಶಾವರ ಚಂದ್ರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಣ ಪಾವತಿಯ ಬಳಿಕ ವಾಟ್ಸ್ಆ್ಯಪ್ನಲ್ಲಿ ಎರಡು ಎಮ್ಮೆಗಳ ವಿಡಿಯೊವನ್ನು ಪ್ರೇಮ್ ಅವರಿಗೆ ಆರೋಪಿ ಕಳುಹಿಸಿದ್ದ. ಆ ಎಮ್ಮೆಗಳನ್ನು ಕಳುಹಿಸುತ್ತಿರುವುದಾಗಿಯೂ ಆರೋಪಿ ತಿಳಿಸಿದ್ದ. ಆದರೆ, ವಾರ ಕಳೆದರೂ ಎಮ್ಮೆಗಳು ಬಂದಿರಲಿಲ್ಲ. ಅನುಮಾನಗೊಂಡು ದಶಾವರ ಚಂದ್ರು ಅವರು ಆರೋಪಿಗೆ ಕರೆ ಮಾಡಿದ್ದರು. ಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮಾತುಕತೆ ವೇಳೆ ವನರಾಜ್ ಭಾಯ್ ನೀಡಿದ್ದ ಗುಜರಾತ್ನ ವಿಳಾಸಕ್ಕೆ ಪರಿಚಿತರನ್ನು ಕಳುಹಿಸಿ ವಿಚಾರಿಸಿದಾಗ ಆತ ಆ ವಿಳಾಸದಲ್ಲೇ ಇಲ್ಲ ಎಂಬುದು ಗೊತ್ತಾಗಿದೆ. ಹಣವನ್ನು ಹಿಂದಿರುಗಿಸದೆ ಮೋಸ ಮಾಡಿರುವ ವನರಾಜ್ ಭಾಯ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ದಶಾವರ ಚಂದ್ರು ಮೂಲಕ ಪ್ರೇಮ್ ದೂರು ನೀಡಿದ್ದಾರೆ.</p>.<p>ಹಣ ವರ್ಗಾವಣೆ ಆಗಿರುವ ಆರೋಪಿ ವನರಾಜ್ನ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರ ನಿರ್ದೇಶಕ ಪ್ರೇಮ್ ಅವರಿಂದ ₹4.50 ಲಕ್ಷ ಪಡೆದು ವಂಚಿಸಲಾಗಿದ್ದು, ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಗುಜರಾತ್ನ ವ್ಯಕ್ತಿಯ ವಿರುದ್ಧ ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>ಪ್ರೇಮ್ ಅವರ ವ್ಯವಸ್ಥಾಪಕ ದಶಾವರ ಚಂದ್ರು ಅವರು ನೀಡಿದ ದೂರು ಆಧರಿಸಿ ಗುಜರಾತ್ನ ವಘೇಲಾ ವನರಾಜ್ ಭಾಯ್ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ.</p>.<p>ಪ್ರೇಮ್ ಅವರು ಹೈನುಗಾರಿಕೆ ನಡೆಸಲು ಗುಜರಾತ್ ರಾಜ್ಯದಲ್ಲಿ ಎಮ್ಮೆಗಳನ್ನು ಖರೀದಿಸಲು ನಿರ್ಧರಿಸಿದ್ದರು. ಈ ನಡುವೆ ವಘೇಲಾ ವನರಾಜ್ ಭಾಯ್ ಎಂಬಾತನ ಪರಿಚಯವಾಗಿತ್ತು. ಎಮ್ಮೆಗಳ ಖರೀದಿ ಸಂಬಂಧ ವನರಾಜ್ ಜತೆ ಮಾತುಕತೆ ನಡೆಸಿದ್ದ ಪ್ರೇಮ್ ಅವರು, ಆತನಿಗೆ ಮುಂಗಡವಾಗಿ ಜುಲೈನಲ್ಲಿ ₹25 ಸಾವಿರ ಪಾವತಿಸಿದ್ದರು. ಬಳಿಕ ಆತನ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ₹ 4.50 ಲಕ್ಷ ವರ್ಗಾಯಿಸಿದ್ದರು ಎಂದು ದಶಾವರ ಚಂದ್ರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಣ ಪಾವತಿಯ ಬಳಿಕ ವಾಟ್ಸ್ಆ್ಯಪ್ನಲ್ಲಿ ಎರಡು ಎಮ್ಮೆಗಳ ವಿಡಿಯೊವನ್ನು ಪ್ರೇಮ್ ಅವರಿಗೆ ಆರೋಪಿ ಕಳುಹಿಸಿದ್ದ. ಆ ಎಮ್ಮೆಗಳನ್ನು ಕಳುಹಿಸುತ್ತಿರುವುದಾಗಿಯೂ ಆರೋಪಿ ತಿಳಿಸಿದ್ದ. ಆದರೆ, ವಾರ ಕಳೆದರೂ ಎಮ್ಮೆಗಳು ಬಂದಿರಲಿಲ್ಲ. ಅನುಮಾನಗೊಂಡು ದಶಾವರ ಚಂದ್ರು ಅವರು ಆರೋಪಿಗೆ ಕರೆ ಮಾಡಿದ್ದರು. ಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮಾತುಕತೆ ವೇಳೆ ವನರಾಜ್ ಭಾಯ್ ನೀಡಿದ್ದ ಗುಜರಾತ್ನ ವಿಳಾಸಕ್ಕೆ ಪರಿಚಿತರನ್ನು ಕಳುಹಿಸಿ ವಿಚಾರಿಸಿದಾಗ ಆತ ಆ ವಿಳಾಸದಲ್ಲೇ ಇಲ್ಲ ಎಂಬುದು ಗೊತ್ತಾಗಿದೆ. ಹಣವನ್ನು ಹಿಂದಿರುಗಿಸದೆ ಮೋಸ ಮಾಡಿರುವ ವನರಾಜ್ ಭಾಯ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ದಶಾವರ ಚಂದ್ರು ಮೂಲಕ ಪ್ರೇಮ್ ದೂರು ನೀಡಿದ್ದಾರೆ.</p>.<p>ಹಣ ವರ್ಗಾವಣೆ ಆಗಿರುವ ಆರೋಪಿ ವನರಾಜ್ನ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>