<p><strong>ಬೆಂಗಳೂರು: </strong>ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡಿಯಿಂದಾಗಿ<br />ದ್ವಿಚಕ್ರ ವಾಹನ ಉರುಳಿ ಬಿದ್ದಿದ್ದು, ಸವಾರ ಖುರ್ಷಿದ್ ಅಹ್ಮದ್ (65) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಮೈಕೊ ಲೇಔಟ್ನ ಬಿಸ್ಮಿಲ್ಲಾ ನಗರದ ನಿವಾಸಿ ಖರ್ಷಿದ್ ಅಹ್ಮದ್, ಅಂಗವಿಕಲರಾಗಿದ್ದರು.<br />ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಎರಡು ಪ್ರತ್ಯೇಕ ಚಕ್ರಗಳನ್ನು ಅಳವಡಿಸಿಕೊಂಡು ಬಳಸುತ್ತಿದ್ದರು. ಅದೇ ವಾಹನದಲ್ಲಿ ಸೋಮವಾರ ರಾತ್ರಿ ವಿಶ್ವೇಶ್ವರಯ್ಯ ಬಡಾವಣೆಯ 4ನೇ ಹಂತದಲ್ಲಿರುವ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು<br />ಹೇಳಿದರು.</p>.<p>‘ರಸ್ತೆ ಗುಂಡಿಯಿಂದಾಗಿ ವಾಹನ ಉರುಳಿಬಿದ್ದು ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಜಲಮಂಡಳಿ ಗುತ್ತಿಗೆದಾರ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಅವರು ತಿಳಿಸಿದರು.</p>.<p class="Subhead">ಮಳೆಯಿಂದ ಕಿತ್ತುಹೋದ ಮಣ್ಣು: ‘ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಸುತ್ತಮುತ್ತ ಒಳಚರಂಡಿ ಕೊಳವೆ ಅಳವಡಿಸುವ ಕೆಲಸ ನಡೆಯುತ್ತಿದೆ. ಜಲಮಂಡಳಿಯ ಕಾಮಗಾರಿಯ ಗುತ್ತಿಗೆ ಪಡೆದವರು, ಈ ಕೆಲಸ ಮಾಡಿಸುತ್ತಿದ್ದಾರೆ. ಮಂಗನಹಳ್ಳಿ ಮುಖ್ಯರಸ್ತೆಯಲ್ಲೂ ಇತ್ತೀಚೆಗೆ ಡಾಂಬರ್ ರಸ್ತೆ ಅಗೆದು ಪೈಪ್<br />ಅಳವಡಿಸಲಾಗಿತ್ತು.’</p>.<p>‘ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ಮಣ್ಣು ಅಗೆದು ಗುಂಡಿ ತೊಡಲಾಗಿತ್ತು. ಅದರೊಳಗೆ ಕೊಳವೆ ಅಳವಡಿಸಿ, ನಂತರ ಮಣ್ಣಿನಿಂದ ಮುಚ್ಚಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಮಣ್ಣು ಕಿತ್ತು ಹೋಗಿ, ದೊಡ್ಡ ಗುಂಡಿ ಸೃಷ್ಟಿಯಾಗಿತ್ತು. ಅದರೊಳಗೆ ನೀರು ನಿಂತುಕೊಂಡಿತ್ತು’ ಎಂದೂ ಪೊಲೀಸರು ವಿವರಿಸಿದರು.</p>.<p>‘ರಸ್ತೆ ಮೇಲೆ ನೀರು ನಿಂತಿರಬಹುದೆಂದು ಕೆಲ ಸವಾರರು, ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದರು. ಆದರೆ, ಗುಂಡಿಯಲ್ಲಿ ವಾಹನಗಳು ಇಳಿದು ಉರುಳಿ ಬೀಳುತ್ತಿದ್ದವು. ಇದರಿಂದಾಗಿ ಅನೇಕ ಸವಾರರು ಗಾಯಗೊಂಡಿದ್ದರು ಎಂಬ ಮಾಹಿತಿಯೂ<br />ಇದೆ.’</p>.<p>‘ಖುರ್ಷಿದ್ ಅಹ್ಮದ್<br />ಅವರುಕೆಲಸ ನಿಮಿತ್ತ ಇದೇ ರಸ್ತೆಯಲ್ಲಿ ಹೊರಟಿದ್ದರು. ಗುಂಡಿಯಲ್ಲಿ ಚಕ್ರಗಳು ಇಳಿದಾಗ ವಾಹನ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡು ನರಳುತ್ತಿದ್ದ ಖುರ್ಷಿದ್ ಅವರನ್ನು ಸ್ಥಳೀಯರೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸರು<br />ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡಿಯಿಂದಾಗಿ<br />ದ್ವಿಚಕ್ರ ವಾಹನ ಉರುಳಿ ಬಿದ್ದಿದ್ದು, ಸವಾರ ಖುರ್ಷಿದ್ ಅಹ್ಮದ್ (65) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಮೈಕೊ ಲೇಔಟ್ನ ಬಿಸ್ಮಿಲ್ಲಾ ನಗರದ ನಿವಾಸಿ ಖರ್ಷಿದ್ ಅಹ್ಮದ್, ಅಂಗವಿಕಲರಾಗಿದ್ದರು.<br />ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಎರಡು ಪ್ರತ್ಯೇಕ ಚಕ್ರಗಳನ್ನು ಅಳವಡಿಸಿಕೊಂಡು ಬಳಸುತ್ತಿದ್ದರು. ಅದೇ ವಾಹನದಲ್ಲಿ ಸೋಮವಾರ ರಾತ್ರಿ ವಿಶ್ವೇಶ್ವರಯ್ಯ ಬಡಾವಣೆಯ 4ನೇ ಹಂತದಲ್ಲಿರುವ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು<br />ಹೇಳಿದರು.</p>.<p>‘ರಸ್ತೆ ಗುಂಡಿಯಿಂದಾಗಿ ವಾಹನ ಉರುಳಿಬಿದ್ದು ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಜಲಮಂಡಳಿ ಗುತ್ತಿಗೆದಾರ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಅವರು ತಿಳಿಸಿದರು.</p>.<p class="Subhead">ಮಳೆಯಿಂದ ಕಿತ್ತುಹೋದ ಮಣ್ಣು: ‘ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಸುತ್ತಮುತ್ತ ಒಳಚರಂಡಿ ಕೊಳವೆ ಅಳವಡಿಸುವ ಕೆಲಸ ನಡೆಯುತ್ತಿದೆ. ಜಲಮಂಡಳಿಯ ಕಾಮಗಾರಿಯ ಗುತ್ತಿಗೆ ಪಡೆದವರು, ಈ ಕೆಲಸ ಮಾಡಿಸುತ್ತಿದ್ದಾರೆ. ಮಂಗನಹಳ್ಳಿ ಮುಖ್ಯರಸ್ತೆಯಲ್ಲೂ ಇತ್ತೀಚೆಗೆ ಡಾಂಬರ್ ರಸ್ತೆ ಅಗೆದು ಪೈಪ್<br />ಅಳವಡಿಸಲಾಗಿತ್ತು.’</p>.<p>‘ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ಮಣ್ಣು ಅಗೆದು ಗುಂಡಿ ತೊಡಲಾಗಿತ್ತು. ಅದರೊಳಗೆ ಕೊಳವೆ ಅಳವಡಿಸಿ, ನಂತರ ಮಣ್ಣಿನಿಂದ ಮುಚ್ಚಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಮಣ್ಣು ಕಿತ್ತು ಹೋಗಿ, ದೊಡ್ಡ ಗುಂಡಿ ಸೃಷ್ಟಿಯಾಗಿತ್ತು. ಅದರೊಳಗೆ ನೀರು ನಿಂತುಕೊಂಡಿತ್ತು’ ಎಂದೂ ಪೊಲೀಸರು ವಿವರಿಸಿದರು.</p>.<p>‘ರಸ್ತೆ ಮೇಲೆ ನೀರು ನಿಂತಿರಬಹುದೆಂದು ಕೆಲ ಸವಾರರು, ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದರು. ಆದರೆ, ಗುಂಡಿಯಲ್ಲಿ ವಾಹನಗಳು ಇಳಿದು ಉರುಳಿ ಬೀಳುತ್ತಿದ್ದವು. ಇದರಿಂದಾಗಿ ಅನೇಕ ಸವಾರರು ಗಾಯಗೊಂಡಿದ್ದರು ಎಂಬ ಮಾಹಿತಿಯೂ<br />ಇದೆ.’</p>.<p>‘ಖುರ್ಷಿದ್ ಅಹ್ಮದ್<br />ಅವರುಕೆಲಸ ನಿಮಿತ್ತ ಇದೇ ರಸ್ತೆಯಲ್ಲಿ ಹೊರಟಿದ್ದರು. ಗುಂಡಿಯಲ್ಲಿ ಚಕ್ರಗಳು ಇಳಿದಾಗ ವಾಹನ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡು ನರಳುತ್ತಿದ್ದ ಖುರ್ಷಿದ್ ಅವರನ್ನು ಸ್ಥಳೀಯರೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸರು<br />ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>