ಮಳೆ ಬಂದಾಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ವಿದ್ಯುತ್ ಕಂಬಗಳು ಮುರಿದು ಬೀಳುವುದು, ಮ್ಯಾನ್ಹೋಲ್ಗಳು ತೆರೆದುಕೊಳ್ಳುವುದು ಹಾಗೂ ಮರ ಬೀಳುವುದು ಮುಂತಾದ ಅವಘಡ ನಡೆದರೆ ಆಸ್ತಿಪಾಸ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯುವ ಹೊಣೆ ಈ ತಂಡಗಳ ಮೇಲಿದೆ. ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ಪೊಲೀಸ್ ವಿಭಾಗದಲ್ಲೂ ವಲಯವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.