<p>ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶದಿಂದ ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ.8 ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ವಿಶೇಷ ಆಯುಕ್ತರನ್ನು ಆಯಾ ತಂಡದ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.</p>.<p>ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿರುತ್ತಾರೆ.</p>.<p>ಮಳೆ ಬಂದಾಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ವಿದ್ಯುತ್ ಕಂಬಗಳು ಮುರಿದು ಬೀಳುವುದು, ಮ್ಯಾನ್ಹೋಲ್ಗಳು ತೆರೆದುಕೊಳ್ಳುವುದು ಹಾಗೂ ಮರ ಬೀಳುವುದು ಮುಂತಾದ ಅವಘಡ ನಡೆದರೆ ಆಸ್ತಿಪಾಸ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯುವ ಹೊಣೆ ಈ ತಂಡಗಳ ಮೇಲಿದೆ. ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ಪೊಲೀಸ್ ವಿಭಾಗದಲ್ಲೂ ವಲಯವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶದಿಂದ ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ.8 ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ವಿಶೇಷ ಆಯುಕ್ತರನ್ನು ಆಯಾ ತಂಡದ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.</p>.<p>ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿರುತ್ತಾರೆ.</p>.<p>ಮಳೆ ಬಂದಾಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ವಿದ್ಯುತ್ ಕಂಬಗಳು ಮುರಿದು ಬೀಳುವುದು, ಮ್ಯಾನ್ಹೋಲ್ಗಳು ತೆರೆದುಕೊಳ್ಳುವುದು ಹಾಗೂ ಮರ ಬೀಳುವುದು ಮುಂತಾದ ಅವಘಡ ನಡೆದರೆ ಆಸ್ತಿಪಾಸ್ತಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯುವ ಹೊಣೆ ಈ ತಂಡಗಳ ಮೇಲಿದೆ. ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ಪೊಲೀಸ್ ವಿಭಾಗದಲ್ಲೂ ವಲಯವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>