<p><strong>ಬೆಂಗಳೂರು</strong>: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚಿಸಿ ಕಾರ್ಮಿಕರ ಕುಂದುಕೊರತೆಗಳನ್ನು ಬಗೆಹರಿಸಬೇಕು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಆಗ್ರಹಿಸಿದೆ.</p>.<p>ಫೆಡರೇಷನ್ನ ಕೇಂದ್ರ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಬಗ್ಗೆ ವಿವಿಧ ನಿರ್ಣಯಗಳನ್ನು ಕೈಗೊಂಡಿದೆ.</p>.<p>ವಿವಿಧ ನಿಗಮಗಳು, ವಿಭಾಗ ಮಟ್ಟದಲ್ಲಿ, ಘಟಕಗಳ ಮಟ್ಟದಲ್ಲಿ ಮಾತ್ರವಲ್ಲದೇ ಕೇಂದ್ರ ಮಟ್ಟದಲ್ಲಿಯೂ ಸಂಘಟನೆಗಳೊಂದಿಗೆ ಸಭೆ ನಡೆಸಬೇಕು. ವೇತನ ಸಮಸ್ಯೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಶಕ್ತಿ ಯೋಜನೆಯಿಂದ ನೌಕರರಿಗೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ತಾಂತ್ರಿಕ ಸಿಬ್ಬಂದಿಗೆ ಪ್ರೋತ್ಸಾಹಧನ ಕೊಡಬೇಕು ಎಂದು ಒತ್ತಾಯಿಸಲಾಯಿತು.</p>.<p>ಫಾರಂ–4 ಅನ್ನು ಕಾನೂನು, ಒಪ್ಪಂದಗಳಿಗೆ ಅನುಗುಣವಾಗಿ ಪುನರ್ರಚಿಸಬೇಕು. ಸಿಬ್ಬಂದಿ ನೇಮಿಸಬೇಕು. ಕೆಎಸ್ಆರ್ಟಿಸಿಯಲ್ಲಿ ಅನುಕಂಪ ಆಧಾರಿತ ನೇಮಕಾತಿ ಮೂಲಕ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.</p>.<p>ಬೇಡಿಕೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸದಿದ್ದರೆ ಜಂಟಿ ಕ್ರಿಯಾ ಸಮಿತಿಯು ಹಮ್ಮಿಕೊಳ್ಳುವ ಎಲ್ಲ ಚಳವಳಿಗಳಲ್ಲಿ ನೌಕರರು ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಯಿತು ಎಂದು ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚಿಸಿ ಕಾರ್ಮಿಕರ ಕುಂದುಕೊರತೆಗಳನ್ನು ಬಗೆಹರಿಸಬೇಕು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಆಗ್ರಹಿಸಿದೆ.</p>.<p>ಫೆಡರೇಷನ್ನ ಕೇಂದ್ರ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಬಗ್ಗೆ ವಿವಿಧ ನಿರ್ಣಯಗಳನ್ನು ಕೈಗೊಂಡಿದೆ.</p>.<p>ವಿವಿಧ ನಿಗಮಗಳು, ವಿಭಾಗ ಮಟ್ಟದಲ್ಲಿ, ಘಟಕಗಳ ಮಟ್ಟದಲ್ಲಿ ಮಾತ್ರವಲ್ಲದೇ ಕೇಂದ್ರ ಮಟ್ಟದಲ್ಲಿಯೂ ಸಂಘಟನೆಗಳೊಂದಿಗೆ ಸಭೆ ನಡೆಸಬೇಕು. ವೇತನ ಸಮಸ್ಯೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಶಕ್ತಿ ಯೋಜನೆಯಿಂದ ನೌಕರರಿಗೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ತಾಂತ್ರಿಕ ಸಿಬ್ಬಂದಿಗೆ ಪ್ರೋತ್ಸಾಹಧನ ಕೊಡಬೇಕು ಎಂದು ಒತ್ತಾಯಿಸಲಾಯಿತು.</p>.<p>ಫಾರಂ–4 ಅನ್ನು ಕಾನೂನು, ಒಪ್ಪಂದಗಳಿಗೆ ಅನುಗುಣವಾಗಿ ಪುನರ್ರಚಿಸಬೇಕು. ಸಿಬ್ಬಂದಿ ನೇಮಿಸಬೇಕು. ಕೆಎಸ್ಆರ್ಟಿಸಿಯಲ್ಲಿ ಅನುಕಂಪ ಆಧಾರಿತ ನೇಮಕಾತಿ ಮೂಲಕ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.</p>.<p>ಬೇಡಿಕೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸದಿದ್ದರೆ ಜಂಟಿ ಕ್ರಿಯಾ ಸಮಿತಿಯು ಹಮ್ಮಿಕೊಳ್ಳುವ ಎಲ್ಲ ಚಳವಳಿಗಳಲ್ಲಿ ನೌಕರರು ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಯಿತು ಎಂದು ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>