ಬೆಂಗಳೂರು: ಉಪವಾಸ ಇದ್ದವನಿಗೆ ಮಾತ್ರ ಹಸಿವು ಗೊತ್ತಾಗುತ್ತದೆ. ಹಸಿವು ಗೊತ್ತಾದವನಿಗೆ ಮಾತ್ರ ಊಟದ ರುಚಿ ಗೊತ್ತಾಗುತ್ತದೆ. ಆದ್ದರಿಂದ ಹಸಿವು ಸಂಸ್ಕಾರಯುತವಾದ ವಿಷಯ. ಇವತ್ತು ಸರ್ಕಾರ ಬಹಳ ದೊಡ್ಡ ಮನಸ್ಸು ಮಾಡಿ, ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಸಾಯಂಕಾಲ ತಂಗಳದ ಊಟ, ಶಾಲೆಯ ಅವಧಿಯಲ್ಲಿ ಎಲ್ಲರಿಗೂ ನಿದ್ರೆ, ಇಂಥ ವ್ಯವಸ್ಥೆಗಳನ್ನೆಲ್ಲ ಮಾಡುತ್ತಿದೆ. ಆದರೆ, ಭಾರತ ದೇಶದ ಸಂಶೋಧನೆ ಇದಲ್ಲ ಎಂದುವಿದ್ವಾನ್ ಉಮಾಕಾಂತ್ ಭಟ್ ಸರ್ಕಾರ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದರು.