ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ದಶಕಗಳಲ್ಲಿ ದಿಶಾ ಭಾರತ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ನಾಯಕತ್ವದ ಗುಣಗಳು ಮತ್ತು ಜೀವನ ಕೌಶಲಗಳು, ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರನ್ನು ಬೆಳೆಸುವ ಉದ್ದೇಶ ಹೊಂದಿದೆ. ತಿಂಗಳ ಉಪನ್ಯಾಸ ಮಾಲಿಕೆ, ಶಿಕ್ಷಣ ತಜ್ಞರ ವಿಚಾರಗೋಷ್ಠಿ, ಯುವ ಸಮಾವೇಶ, ಎನ್ಎಸ್ಎಸ್ ಸಂಯೋಜಕರ ಸಮಾಗಮ, ಮೇರಾ ಭಾರತ್ ಮಹಾನ್ ಎಂಬ ರಾಜ್ಯಮಟ್ಟದ ರಸಪ್ರಶ್ನೆ ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.