<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮೆಟ್ರೊ ಬೋಗಿಗಳನ್ನು ನಿಯಮಿತವಾಗಿಸೋಂಕು ಮುಕ್ತಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಬೆಂಗಳೂರು ಮೆಟ್ರೊ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮೆಟ್ರೊ ರೈಲಿನ ಬೋಗಿಗಳಲ್ಲಿ ಪ್ರಯಾಣಿಕರ ಕರಸ್ಪರ್ಶ ಹೆಚ್ಚಾಗಿ ಆಗುವ ಹ್ಯಾಂಡಲ್ಗಳು, ಬಾಗಿಲು, ನಿಲ್ದಾಣಗಳ ಲಿಫ್ಟ್ನ ಸ್ವಿಚ್ಗಳನ್ನು ಸೋಂಕು ಮುಕ್ತ ದ್ರಾವಣದಿಂದ ಸ್ವಚ್ಛಗೊಳಿಸಲಾಗುತ್ತಿದೆ. ಸೋಮವಾರ ನಗರದಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯನ್ನು ಇನ್ನಷ್ಟು ವ್ಯವಸ್ಥಿತವಾಗಿ ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p><strong>ದೆಹಲಿ: ಸಾರ್ವಜನಿಕ ಸಾರಿಗೆ ಸ್ವಚ್ಛತೆಗೆ ಆದ್ಯತೆ</strong></p>.<p>ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿದೆಹಲಿಯಲ್ಲಿ ಮೆಟ್ರೊ ರೈಲುಗಳು ಮತ್ತು ನಗರ ಸಾರಿಗೆ ಬಸ್ಗಳನ್ನು ನಿಯಮಿತವಾಗಿ ಸೋಂಕು ಮುಕ್ತಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮೆಟ್ರೊ ರೈಲಿನ ಎಲ್ಲ ಬೋಗಿಗಳು ಮತ್ತು ಸಾರ್ವಜನಿಕ ಸಾರಿಗೆಗೆ ಬಳಕೆಯಾಗುವ ಬಸ್ಗಳನ್ನು ಸೋಂಕು ನಿವಾರಕಗಳನ್ನು ಬಳಸಿ ಶುಚಿಗೊಳಿಸಲಾಗುತ್ತಿದೆ. ಸಾರಿಗೆ ಸಚಿವ ಕೈಲಾಶ್ ಗೆಹ್ಲಾಟ್ ಸೋಂಕು ನಿವಾರಣೆಯ ಬಗ್ಗೆ ಖುದ್ದು ಗಮನ ಹರಿಸುತ್ತಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/first-corona-virus-infection-found-in-karnataka-711084.html" target="_blank">ಬೆಂಗಳೂರಿನಲ್ಲಿ ದೃಢಪಟ್ಟ ಕೋವಿಡ್ 19: ಪ್ರಾಥಮಿಕ ಶಾಲೆಗಳಿಗೆ ರಜೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ 19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮೆಟ್ರೊ ಬೋಗಿಗಳನ್ನು ನಿಯಮಿತವಾಗಿಸೋಂಕು ಮುಕ್ತಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಬೆಂಗಳೂರು ಮೆಟ್ರೊ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮೆಟ್ರೊ ರೈಲಿನ ಬೋಗಿಗಳಲ್ಲಿ ಪ್ರಯಾಣಿಕರ ಕರಸ್ಪರ್ಶ ಹೆಚ್ಚಾಗಿ ಆಗುವ ಹ್ಯಾಂಡಲ್ಗಳು, ಬಾಗಿಲು, ನಿಲ್ದಾಣಗಳ ಲಿಫ್ಟ್ನ ಸ್ವಿಚ್ಗಳನ್ನು ಸೋಂಕು ಮುಕ್ತ ದ್ರಾವಣದಿಂದ ಸ್ವಚ್ಛಗೊಳಿಸಲಾಗುತ್ತಿದೆ. ಸೋಮವಾರ ನಗರದಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯನ್ನು ಇನ್ನಷ್ಟು ವ್ಯವಸ್ಥಿತವಾಗಿ ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p><strong>ದೆಹಲಿ: ಸಾರ್ವಜನಿಕ ಸಾರಿಗೆ ಸ್ವಚ್ಛತೆಗೆ ಆದ್ಯತೆ</strong></p>.<p>ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿದೆಹಲಿಯಲ್ಲಿ ಮೆಟ್ರೊ ರೈಲುಗಳು ಮತ್ತು ನಗರ ಸಾರಿಗೆ ಬಸ್ಗಳನ್ನು ನಿಯಮಿತವಾಗಿ ಸೋಂಕು ಮುಕ್ತಗೊಳಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮೆಟ್ರೊ ರೈಲಿನ ಎಲ್ಲ ಬೋಗಿಗಳು ಮತ್ತು ಸಾರ್ವಜನಿಕ ಸಾರಿಗೆಗೆ ಬಳಕೆಯಾಗುವ ಬಸ್ಗಳನ್ನು ಸೋಂಕು ನಿವಾರಕಗಳನ್ನು ಬಳಸಿ ಶುಚಿಗೊಳಿಸಲಾಗುತ್ತಿದೆ. ಸಾರಿಗೆ ಸಚಿವ ಕೈಲಾಶ್ ಗೆಹ್ಲಾಟ್ ಸೋಂಕು ನಿವಾರಣೆಯ ಬಗ್ಗೆ ಖುದ್ದು ಗಮನ ಹರಿಸುತ್ತಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/first-corona-virus-infection-found-in-karnataka-711084.html" target="_blank">ಬೆಂಗಳೂರಿನಲ್ಲಿ ದೃಢಪಟ್ಟ ಕೋವಿಡ್ 19: ಪ್ರಾಥಮಿಕ ಶಾಲೆಗಳಿಗೆ ರಜೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>