ಬೆಂಗಳೂರು: ನಗರದ ಸಜ್ಜನ್ರಾವ್ ಸರ್ಕಲ್ನಲ್ಲಿದ್ದ ಸರ್ ಎಂ.ವಿ. ವಿಶ್ವೇಶ್ವರಯ್ಯ ಅವರ ಪುತ್ಥಳಿಯನ್ನು ಬಿಬಿಎಂಪಿ ತೆರವುಗೊಳಿಸಿದ್ದು, ವೇದಿಕೆಯನ್ನು ಧ್ವಂಸಗೊಳಿಸಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿ.ವಿ. ಪುರಂ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸ್ ಉಪ ಆಯುಕ್ತರಿಗೆ ದೂರು ನೀಡಿದ್ದಾರೆ.