<p><strong>ಬೆಂಗಳೂರು</strong>: ನಗರದ ಸಜ್ಜನ್ರಾವ್ ಸರ್ಕಲ್ನಲ್ಲಿದ್ದ ಸರ್ ಎಂ.ವಿ. ವಿಶ್ವೇಶ್ವರಯ್ಯ ಅವರ ಪುತ್ಥಳಿಯನ್ನು ಬಿಬಿಎಂಪಿ ತೆರವುಗೊಳಿಸಿದ್ದು, ವೇದಿಕೆಯನ್ನು ಧ್ವಂಸಗೊಳಿಸಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿ.ವಿ. ಪುರಂ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸ್ ಉಪ ಆಯುಕ್ತರಿಗೆ ದೂರು ನೀಡಿದ್ದಾರೆ.</p>.<p>ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಮಂಜೂರಾತಿ ಪಡೆದು 2006ರಲ್ಲಿ ಪುತ್ಥಳಿ ನಿರ್ಮಿಸಲಾಗಿತ್ತು. ರಾಜ್ಯಪಾಲರು ಅನಾವರಣಗೊಳಿಸಿದ್ದರು. ಅಂದಿನಿಂದ ಪ್ರತಿವರ್ಷ ಸೆ.15ಕ್ಕೆ ಎಂಜಿನಿಯರ್ ದಿನವನ್ನು ಇಲ್ಲಿ ಆಚರಿಸಲಾಗುತ್ತಿತ್ತು. ಶನಿವಾರ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಪುತ್ಥಳಿಯ ಹಿಂಭಾಗದಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯವರ ಅನುಕೂಲಕ್ಕಾಗಿ ಈ ರೀತಿ ಧ್ವಂಸಗೊಳಿಸಿದ್ದಾರೆ. ಇದರಿಂದ ಸಾರ್ವಜನಿಕರ ಭಾವನೆಗೆ ಧಕ್ಕೆಯಾಗಿದೆ. ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದಕ್ಕಾಗಿ ಹಾಗೂ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಸಂಬಂಧಪಟ್ಟವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಸೋಸಿಯೇಶನ್ ಅಧ್ಯಕ್ಷ ಎಸ್. ವೆಂಕಟೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.</p>.<p>ಅಭಿವೃದ್ಧಿಗಾಗಿ ತೆರವು: ವಿ.ವಿ. ಪುರ ಫುಡ್ಸ್ಟ್ರೀಟ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ ಎಂ.ವಿ. ವಿಶ್ವೇಶ್ವರಯ್ಯ ಅವರ ಪುತ್ಥಳಿಯನ್ನು ಅಲ್ಲಿಂದ ತೆಗೆದು ಸಂರಕ್ಷಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೆ ಅಳವಡಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದರೆ, ಬಿಬಿಎಂಪಿ ದಕ್ಷಿಣ ವಲಯ ಆಯುಕ್ತರಿಗೆ ಈ ಬಗ್ಗೆ ಮಾಹಿತಿ ಇಲ್ಲ. ‘ಏನಾಗಿದೆ ಎಂದು ಪರಿಶೀಲಿಸುತ್ತೇನೆ’ ಎಂದು ವಲಯ ಆಯುಕ್ತೆ ವಿನೋತ್ ಪ್ರಿಯಾ ಆರ್. ಪ್ರತಿಕ್ರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಸಜ್ಜನ್ರಾವ್ ಸರ್ಕಲ್ನಲ್ಲಿದ್ದ ಸರ್ ಎಂ.ವಿ. ವಿಶ್ವೇಶ್ವರಯ್ಯ ಅವರ ಪುತ್ಥಳಿಯನ್ನು ಬಿಬಿಎಂಪಿ ತೆರವುಗೊಳಿಸಿದ್ದು, ವೇದಿಕೆಯನ್ನು ಧ್ವಂಸಗೊಳಿಸಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿ.ವಿ. ಪುರಂ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸ್ ಉಪ ಆಯುಕ್ತರಿಗೆ ದೂರು ನೀಡಿದ್ದಾರೆ.</p>.<p>ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಮಂಜೂರಾತಿ ಪಡೆದು 2006ರಲ್ಲಿ ಪುತ್ಥಳಿ ನಿರ್ಮಿಸಲಾಗಿತ್ತು. ರಾಜ್ಯಪಾಲರು ಅನಾವರಣಗೊಳಿಸಿದ್ದರು. ಅಂದಿನಿಂದ ಪ್ರತಿವರ್ಷ ಸೆ.15ಕ್ಕೆ ಎಂಜಿನಿಯರ್ ದಿನವನ್ನು ಇಲ್ಲಿ ಆಚರಿಸಲಾಗುತ್ತಿತ್ತು. ಶನಿವಾರ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಪುತ್ಥಳಿಯ ಹಿಂಭಾಗದಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯವರ ಅನುಕೂಲಕ್ಕಾಗಿ ಈ ರೀತಿ ಧ್ವಂಸಗೊಳಿಸಿದ್ದಾರೆ. ಇದರಿಂದ ಸಾರ್ವಜನಿಕರ ಭಾವನೆಗೆ ಧಕ್ಕೆಯಾಗಿದೆ. ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದಕ್ಕಾಗಿ ಹಾಗೂ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಸಂಬಂಧಪಟ್ಟವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಸೋಸಿಯೇಶನ್ ಅಧ್ಯಕ್ಷ ಎಸ್. ವೆಂಕಟೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.</p>.<p>ಅಭಿವೃದ್ಧಿಗಾಗಿ ತೆರವು: ವಿ.ವಿ. ಪುರ ಫುಡ್ಸ್ಟ್ರೀಟ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ ಎಂ.ವಿ. ವಿಶ್ವೇಶ್ವರಯ್ಯ ಅವರ ಪುತ್ಥಳಿಯನ್ನು ಅಲ್ಲಿಂದ ತೆಗೆದು ಸಂರಕ್ಷಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೆ ಅಳವಡಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದರೆ, ಬಿಬಿಎಂಪಿ ದಕ್ಷಿಣ ವಲಯ ಆಯುಕ್ತರಿಗೆ ಈ ಬಗ್ಗೆ ಮಾಹಿತಿ ಇಲ್ಲ. ‘ಏನಾಗಿದೆ ಎಂದು ಪರಿಶೀಲಿಸುತ್ತೇನೆ’ ಎಂದು ವಲಯ ಆಯುಕ್ತೆ ವಿನೋತ್ ಪ್ರಿಯಾ ಆರ್. ಪ್ರತಿಕ್ರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>