ಈ ವೇಳೆ ಬಿಜೆಪಿ ಯುವ ಮೋರ್ಚಾ ಸದಸ್ಯರೊಂದಿಗೆ ಬಂದಿದ್ದ ವೆಂಕಟೇಶ್, ಬಿಜೆಪಿ ಪರ ಘೋಷಣೆಗಳನ್ನು ಕೂಗಿ ಪ್ರಚಾರಕ್ಕೆ ಅಡ್ಡಿಪಡಿಸಿ, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಬಿ.ಕೆ.ಕೃಷ್ಣ ಅವರು ದೂರು ದಾಖಲಿಸಿದ್ದರು. ಇದರನ್ವಯ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.