ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿನಗರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದವರ ಬಂಧನ

Published 6 ಮೇ 2023, 21:05 IST
Last Updated 6 ಮೇ 2023, 21:05 IST
ಅಕ್ಷರ ಗಾತ್ರ

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕೆಲ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹ 7.60 ಲಕ್ಷ ಜಪ್ತಿ ಮಾಡಿದ್ದಾರೆ.

‘ಸ್ಥಳೀಯ ನಿವಾಸಿಗಳಾದ ಭಾಸ್ಕರ್ ಹಾಗೂ ಪಿಂಟೊ ಪ್ರಮೋದ್ ಬಂಧಿತರು. ಇವರಿಬ್ಬರು, ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಆಮಿಷವೊಡ್ಡಿ ಮತದಾರರಿಗೆ ಹಣ ಹಂಚುತ್ತಿದ್ದರೆಂದು ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಚುನಾವಣಾಧಿಕಾರಿ ತಂಡದ ಜೊತೆ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿಗಳ ಬಳಿಯ ದ್ವಿಚಕ್ರ ವಾಹನದಲ್ಲಿ ₹ 7.60 ಲಕ್ಷ ನಗದು ಸಿಕ್ಕಿದೆ. ಜೊತೆಗೆ, ಕ್ಷೇತ್ರದ ಮತದಾರರ ಪಟ್ಟಿ ಜೆರಾಕ್ಸ್ ಪ್ರತಿಯೂ ಲಭ್ಯವಾಗಿದೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ತಿಳಿಸಿವೆ.

‘ಟಸ್ಕರ್ ಟೌನ್‌ನಲ್ಲಿರುವ ಕೆಲ ಮನೆಗಳಿಗೆ ಶುಕ್ರವಾರ ರಾತ್ರಿ ಹೋಗಿದ್ದ ಆರೋಪಿಗಳು, ಮತದಾರರ ಪಟ್ಟಿ ಪರಿಶೀಲಿಸಿ ಒಬ್ಬೊಬ್ಬರಿಗೆ ₹ 2,000ರಿಂದ ₹3,000 ನೀಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ಸಂದರ್ಭದಲ್ಲಿ ಆರೋಪಿಗಳು, ಬಿಜೆಪಿ ಅಭ್ಯರ್ಥಿ ಹೆಸರು ಹೇಳಿದ್ದಾರೆ. ಅವರಿಂದಲೂ ಮಾಹಿತಿ ಪಡೆಯಬೇಕಿದೆ’ ಎಂದು ಮೂಲಗಳು ಹೇಳಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT