<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಬಾಲ್ಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಎನ್. ನಟರಾಜ್ಗೌಡ ಹೇಳಿದರು. </p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾಗಿ ರಚಿಸಿರುವ ವೃತ್ತಿ ಮಾರ್ಗದರ್ಶನದ 25 ಸಾವಿರ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಪುಸ್ತಕದಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲಭ್ಯ ಇರುವ ನವೀನ ಕೋರ್ಸ್ಗಳು, ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಇದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಈ ಪುಸ್ತಕ ಸಹಾಯಕವಾಗಲಿದೆ’ ಎಂದು ವಿವರಿಸಿದರು. </p>.<p>‘ಸುಂಕದಕಟ್ಟೆ, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಜಯನಗರ, ಟೋಲ್ಗೇಟ್, ಉಲ್ಲಾಳು ರಸ್ತೆ, ಕೆಂಗೇರಿ ಉಪನಗರ, ಕೋಣನಕುಂಟೆ ಕ್ರಾಸ್, ಕೇಂಬ್ರಿಡ್ಜ್ ಲೇಔಟ್, ನೆಲಮಂಗಲ, ಯಲಹಂಕ, ದೇವನಹಳ್ಳಿಯಲ್ಲಿ ಇರುವ ಬಾಲ್ಕ್ ಸಂಸ್ಥೆಯ ಶಾಖೆಗಳಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳು ನೀಡಿರುವ ಗುರುತಿನ ಚೀಟಿ ತೋರಿಸಿ ಪುಸ್ತಕಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು. </p>.<p>‘ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಯ ನೆರವಿಗಾಗಿ ಸ್ಕಾಲರ್ಶಿಪ್ ಅಪ್ಟಿಟ್ಯೂಡ್ ಟೆಸ್ಟ್ (ಎಸ್ಎಟಿ) ನಡೆಸಲಾಗುತ್ತಿದೆ. ಮಾರ್ಚ್ 22ರಂದು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್ 5ರಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಟೆಸ್ಟ್ ನಡೆಸಲಾಗುವುದು’ ಎಂದರು. </p>.<p>ಮಾಹಿತಿಗೆ: 88844 98884 ಸಂಪರ್ಕಿಸಬಹುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಬಾಲ್ಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಎನ್. ನಟರಾಜ್ಗೌಡ ಹೇಳಿದರು. </p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷವಾಗಿ ರಚಿಸಿರುವ ವೃತ್ತಿ ಮಾರ್ಗದರ್ಶನದ 25 ಸಾವಿರ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಪುಸ್ತಕದಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲಭ್ಯ ಇರುವ ನವೀನ ಕೋರ್ಸ್ಗಳು, ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಇದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಈ ಪುಸ್ತಕ ಸಹಾಯಕವಾಗಲಿದೆ’ ಎಂದು ವಿವರಿಸಿದರು. </p>.<p>‘ಸುಂಕದಕಟ್ಟೆ, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಜಯನಗರ, ಟೋಲ್ಗೇಟ್, ಉಲ್ಲಾಳು ರಸ್ತೆ, ಕೆಂಗೇರಿ ಉಪನಗರ, ಕೋಣನಕುಂಟೆ ಕ್ರಾಸ್, ಕೇಂಬ್ರಿಡ್ಜ್ ಲೇಔಟ್, ನೆಲಮಂಗಲ, ಯಲಹಂಕ, ದೇವನಹಳ್ಳಿಯಲ್ಲಿ ಇರುವ ಬಾಲ್ಕ್ ಸಂಸ್ಥೆಯ ಶಾಖೆಗಳಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳು ನೀಡಿರುವ ಗುರುತಿನ ಚೀಟಿ ತೋರಿಸಿ ಪುಸ್ತಕಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು. </p>.<p>‘ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಯ ನೆರವಿಗಾಗಿ ಸ್ಕಾಲರ್ಶಿಪ್ ಅಪ್ಟಿಟ್ಯೂಡ್ ಟೆಸ್ಟ್ (ಎಸ್ಎಟಿ) ನಡೆಸಲಾಗುತ್ತಿದೆ. ಮಾರ್ಚ್ 22ರಂದು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್ 5ರಂದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಟೆಸ್ಟ್ ನಡೆಸಲಾಗುವುದು’ ಎಂದರು. </p>.<p>ಮಾಹಿತಿಗೆ: 88844 98884 ಸಂಪರ್ಕಿಸಬಹುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>