ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಘಟಕದ ವತಿಯಿಂದ ಹೆಗಡೆನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ರಂಜಾನ್ ಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಕುಟುಂಬಗಳಿಗೆ 5 ಸಾವಿರ ದಿನಸಿ ಕಿಟ್ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ‘ಎಲ್ಲ ಜಾತಿ-ಧರ್ಮದ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಪಕ್ಷದ ಆದ್ಯತೆ ಆಗಿದೆ. ರಂಜಾನ್, ಮುಸಲ್ಮಾನರಿಗೆ ಪವಿತ್ರವಾದ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸ ಮತ್ತು ಅನ್ನದ ಮಹತ್ವ ತಿಳಿಸುವ ಸಲುವಾಗಿ ಈ ಆಚರಣೆಯನ್ನು ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇರುವವರು ಇಲ್ಲದವರಿಗೆ ನೀಡುವ ಪದ್ಧತಿಯಿದೆ’ ಎಂದರು.
ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡರಾದ ಟಿ.ಎ.ಶರವಣ, ಚೌಡರೆಡ್ಡಿ ತೂಪಲ್ಲಿ, ಟಿ.ಎನ್. ಹರೀಶ್ ಕುಮಾರ್, ಎಂ.ಖಲೀಲ್ ಉಲ್ಲಾ, ಸೈಯದ್ ಅನೀಫ್ ಬಾಬು ಮತ್ತಿತರರು ಉಪಸ್ಥಿತರಿದ್ದರು.