<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಘಟಕದ ವತಿಯಿಂದ ಹೆಗಡೆನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ರಂಜಾನ್ ಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಕುಟುಂಬಗಳಿಗೆ 5 ಸಾವಿರ ದಿನಸಿ ಕಿಟ್ ವಿತರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಎಲ್ಲ ಜಾತಿ-ಧರ್ಮದ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಪಕ್ಷದ ಆದ್ಯತೆ ಆಗಿದೆ. ರಂಜಾನ್, ಮುಸಲ್ಮಾನರಿಗೆ ಪವಿತ್ರವಾದ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸ ಮತ್ತು ಅನ್ನದ ಮಹತ್ವ ತಿಳಿಸುವ ಸಲುವಾಗಿ ಈ ಆಚರಣೆಯನ್ನು ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇರುವವರು ಇಲ್ಲದವರಿಗೆ ನೀಡುವ ಪದ್ಧತಿಯಿದೆ’ ಎಂದರು.</p>.<p>ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡರಾದ ಟಿ.ಎ.ಶರವಣ, ಚೌಡರೆಡ್ಡಿ ತೂಪಲ್ಲಿ, ಟಿ.ಎನ್. ಹರೀಶ್ ಕುಮಾರ್, ಎಂ.ಖಲೀಲ್ ಉಲ್ಲಾ, ಸೈಯದ್ ಅನೀಫ್ ಬಾಬು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಘಟಕದ ವತಿಯಿಂದ ಹೆಗಡೆನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ರಂಜಾನ್ ಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಕುಟುಂಬಗಳಿಗೆ 5 ಸಾವಿರ ದಿನಸಿ ಕಿಟ್ ವಿತರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಎಲ್ಲ ಜಾತಿ-ಧರ್ಮದ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಪಕ್ಷದ ಆದ್ಯತೆ ಆಗಿದೆ. ರಂಜಾನ್, ಮುಸಲ್ಮಾನರಿಗೆ ಪವಿತ್ರವಾದ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸ ಮತ್ತು ಅನ್ನದ ಮಹತ್ವ ತಿಳಿಸುವ ಸಲುವಾಗಿ ಈ ಆಚರಣೆಯನ್ನು ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಇರುವವರು ಇಲ್ಲದವರಿಗೆ ನೀಡುವ ಪದ್ಧತಿಯಿದೆ’ ಎಂದರು.</p>.<p>ಬೆಂಗಳೂರು ಮಹಾನಗರ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್.ಪ್ರಕಾಶ್, ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎನ್.ವೇಣುಗೋಪಾಲ್, ಮುಖಂಡರಾದ ಟಿ.ಎ.ಶರವಣ, ಚೌಡರೆಡ್ಡಿ ತೂಪಲ್ಲಿ, ಟಿ.ಎನ್. ಹರೀಶ್ ಕುಮಾರ್, ಎಂ.ಖಲೀಲ್ ಉಲ್ಲಾ, ಸೈಯದ್ ಅನೀಫ್ ಬಾಬು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>