<p><strong>ಪೀಣ್ಯ ದಾಸರಹಳ್ಳಿ:</strong> ಸಮೀಪದ ಬಾಗಲಗುಂಟೆಯ ಬಿಬಿಎಂಪಿ ಕಚೇರಿ ಅವರಣದಲ್ಲಿ ಯುನೈಟೆಡ್ ವೇ ಬೆಂಗಳೂರು ಸ್ವಯಂ ಸೇವಾ ಸಂಸ್ಥೆ ವತಿಯಿಂದ ಸಿಎಸ್ಅರ್ ಅನುದಾನದಡಿಯಲ್ಲಿ ಪೌರಕಾರ್ಮಿಕರಿಗೆ ಪೊರಕೆ, ಕೈಗವಸು, ರಿಫ್ಲೆಕ್ಟರ್ ಜಾಕೆಟ್, ರೈನ್ ಕೋಟ್, ಕ್ಯಾಪ್, ಪ್ಲಾಸ್ಟಿಕ್ ಬಾಂಡ್ಲಿಗಳನ್ನು ವಿತರಿಸಲಾಯಿತು.</p>.<p>ಸಾಮಗ್ರಿ ವಿತರಿಸಿದ ಬಿಬಿಎಂಪಿ ದಾಸರಹಳ್ಳಿ ವಲಯ ಹೆಚ್ಚುವರಿ ಆಯುಕ್ತ ಬಾಲಶೇಖರ್ ಮಾತನಾಡಿ, ‘ಈ ಸಂಸ್ಥೆಯವರು ಇಂಗು ಗುಂಡಿ ಮಾಡುವುದು, ಸರ್ಕಾರಿ ಶಾಲೆಗಳಿಗೆ ಬಣ್ಣ ಹೊಡೆಯುವುದು, ಬಡ ಜನರಿಗೆ ಸಹಾಯ ನೀಡುವುದು ಮುಂತಾದ ಮಾದರಿ ಕೆಲಸಗಳನ್ನು ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಬಿಬಿಎಂಪಿ ಮುಖ್ಯ ಎಂಜಿನಿಯರ್ ರವಿ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಹನುಮಂತ ನಾಯ್ಕ, ತೋಟಗಾರಿಕೆಯ ಶಿವಲಿಂಗೇಗೌಡ, ಘನತ್ಯಾಜ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಯೋಗೇಶ್, ಲೀಡ್ ಎನ್ವೈರ್ನ್ಮೆಂಟ್ ಪ್ರಾಜೆಕ್ಟ್ನ ಕೆ. ರಾಧಾಕೃಷ್ಣ, ಪ್ರದೀಪ್, ಯುನೈಟೆಡ್ ವೇ ಬೆಂಗಳೂರು ಉಪಾಧ್ಯಕ್ಷ ವೆಂಕಟ ಸುಧಾಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಸಮೀಪದ ಬಾಗಲಗುಂಟೆಯ ಬಿಬಿಎಂಪಿ ಕಚೇರಿ ಅವರಣದಲ್ಲಿ ಯುನೈಟೆಡ್ ವೇ ಬೆಂಗಳೂರು ಸ್ವಯಂ ಸೇವಾ ಸಂಸ್ಥೆ ವತಿಯಿಂದ ಸಿಎಸ್ಅರ್ ಅನುದಾನದಡಿಯಲ್ಲಿ ಪೌರಕಾರ್ಮಿಕರಿಗೆ ಪೊರಕೆ, ಕೈಗವಸು, ರಿಫ್ಲೆಕ್ಟರ್ ಜಾಕೆಟ್, ರೈನ್ ಕೋಟ್, ಕ್ಯಾಪ್, ಪ್ಲಾಸ್ಟಿಕ್ ಬಾಂಡ್ಲಿಗಳನ್ನು ವಿತರಿಸಲಾಯಿತು.</p>.<p>ಸಾಮಗ್ರಿ ವಿತರಿಸಿದ ಬಿಬಿಎಂಪಿ ದಾಸರಹಳ್ಳಿ ವಲಯ ಹೆಚ್ಚುವರಿ ಆಯುಕ್ತ ಬಾಲಶೇಖರ್ ಮಾತನಾಡಿ, ‘ಈ ಸಂಸ್ಥೆಯವರು ಇಂಗು ಗುಂಡಿ ಮಾಡುವುದು, ಸರ್ಕಾರಿ ಶಾಲೆಗಳಿಗೆ ಬಣ್ಣ ಹೊಡೆಯುವುದು, ಬಡ ಜನರಿಗೆ ಸಹಾಯ ನೀಡುವುದು ಮುಂತಾದ ಮಾದರಿ ಕೆಲಸಗಳನ್ನು ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಬಿಬಿಎಂಪಿ ಮುಖ್ಯ ಎಂಜಿನಿಯರ್ ರವಿ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಹನುಮಂತ ನಾಯ್ಕ, ತೋಟಗಾರಿಕೆಯ ಶಿವಲಿಂಗೇಗೌಡ, ಘನತ್ಯಾಜ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಯೋಗೇಶ್, ಲೀಡ್ ಎನ್ವೈರ್ನ್ಮೆಂಟ್ ಪ್ರಾಜೆಕ್ಟ್ನ ಕೆ. ರಾಧಾಕೃಷ್ಣ, ಪ್ರದೀಪ್, ಯುನೈಟೆಡ್ ವೇ ಬೆಂಗಳೂರು ಉಪಾಧ್ಯಕ್ಷ ವೆಂಕಟ ಸುಧಾಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>