‘ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ಹಾಗೂ ಡಿಜಿಟಲ್ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೂ ಚಾಲನೆ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.