<p><strong>ಬೆಂಗಳೂರು</strong>: ಹಲವು ವರ್ಷಗಳಿಂದ ದಾಖಲೆ ಇಲ್ಲದೆ ವಾಸಿಸುತ್ತಿದ್ದ 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಅವರು ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರಗಳನ್ನು ಮಂಗಳವಾರ ವಿತರಿಸಿದರು.</p>.<p>ಯಶವಂತಪುರ, ರಾಜರಾಜೇಶ್ವರಿನಗರ, ಯಲಹಂಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಕ್ಕಿಪಿಕ್ಕಿ, ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರು, ಕುಷ್ಠ ರೋಗದಿಂದ ಗುಣಮುಖರಾದವರಿಗೆ ಹಕ್ಕುಪತ್ರ ನೀಡಿದರು.</p>.<p>ಯಶವಂತಪುರದ ಯಲಚಗುಪ್ಪೆಯ ಹಕ್ಕಿಪಿಕ್ಕಿ ಕಾಲೊನಿಯಲ್ಲಿ 228 ಕುಟುಂಬಗಳಿಗೆ ಹಾಗೂ ಮಾದಿಗರ ಚನ್ನಯ್ಯ ಕೊಳೆಗೇರಿಯಲ್ಲಿ 259 ಮಂದಿಗೆ ಹಕ್ಕುಪತ್ರ, ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಲೆಮಾರಿ ಸಮುದಾಯದ 200 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ನೀಡಲಾಯಿತು.</p>.<p>ಯಲಹಂಕದ ಗಿಡ್ಡೇನಹಳ್ಳಿ ಗ್ರಾಮದ ಬಿಕೆ ಕೊಳೆಗೇರಿಯಲ್ಲಿ 40 ಕುಟುಂಬ ಹಾಗೂ ರಾಜರಾಜೇಶ್ವರಿ ನಗರದ ಮಾತಾಪುರ ದಲಿತ ಕಾಲೊನಿಯಲ್ಲಿ ಕುಷ್ಠ ರೋಗದಿಂದ ಗುಣಮುಖರಾದ 50 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಜಮೀರ್ ಅಹಮದ್ ವಿತರಿಸಿದರು.</p>.<p>ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಶಾಸಕ ಎಸ್. ಟಿ ಸೋಮಶೇಖರ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ್, ಮುಖ್ಯ ಎಂಜಿನಿಯರ್ ಸುಧೀರ್, ತಾಂತ್ರಿಕ ಸಲಹೆಗಾರ ಬಾಲರಾಜ್ ಉಪಸ್ಥಿತರಿದ್ದರು.</p>.<p class="Subhead">ಶೆಡ್ನಲ್ಲಿ ಊಟ: ಯಶವಂತಪುರದ ಯಲಚಗುಪ್ಪೆ ಗ್ರಾಮದ ಮಾದಾರ ಚನ್ನಯ್ಯ ಕೊಳೆಗೇರಿಯಲ್ಲಿ ಮನೆ ಮಂಜೂರಾತಿ ಪತ್ರ ವಿತರಿಸಿದ ವಸತಿ ಸಚಿವ ಜಮೀರ್ ಅಹಮದ್ ಅವರು ಅಲೆಮಾರಿ ಸಮುದಾದಯ ಶರಣಯ್ಯ ಅವರ ಶೆಡ್ನಲ್ಲಿ ಊಟ ಮಾಡಿದರು.</p>.<p>ಶೆಡ್ನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆದಷ್ಟು ಶೀಘ್ರ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಸಚಿವರು ನಮ್ಮ ಶೆಡ್ನಲ್ಲಿ ಊಟ ಮಾಡಿದ್ದು ನಮ್ಮ ಭಾಗ್ಯ. ನಾವು ಪ್ರೀತಿಯಿಂದ ಮಾಡಿದ್ದ ಅಡುಗೆಯನ್ನೇ ಬಡಿಸುವಂತೆ ಕೇಳಿ, ಊಟ ಮಾಡಿದರು. ನಮಗೆ ತುಂಬಾ ಸಂತಸವಾಯಿತು’ ಎಂದು ಶರಣಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಲವು ವರ್ಷಗಳಿಂದ ದಾಖಲೆ ಇಲ್ಲದೆ ವಾಸಿಸುತ್ತಿದ್ದ 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಅವರು ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರಗಳನ್ನು ಮಂಗಳವಾರ ವಿತರಿಸಿದರು.</p>.<p>ಯಶವಂತಪುರ, ರಾಜರಾಜೇಶ್ವರಿನಗರ, ಯಲಹಂಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಕ್ಕಿಪಿಕ್ಕಿ, ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರು, ಕುಷ್ಠ ರೋಗದಿಂದ ಗುಣಮುಖರಾದವರಿಗೆ ಹಕ್ಕುಪತ್ರ ನೀಡಿದರು.</p>.<p>ಯಶವಂತಪುರದ ಯಲಚಗುಪ್ಪೆಯ ಹಕ್ಕಿಪಿಕ್ಕಿ ಕಾಲೊನಿಯಲ್ಲಿ 228 ಕುಟುಂಬಗಳಿಗೆ ಹಾಗೂ ಮಾದಿಗರ ಚನ್ನಯ್ಯ ಕೊಳೆಗೇರಿಯಲ್ಲಿ 259 ಮಂದಿಗೆ ಹಕ್ಕುಪತ್ರ, ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಲೆಮಾರಿ ಸಮುದಾಯದ 200 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರ ನೀಡಲಾಯಿತು.</p>.<p>ಯಲಹಂಕದ ಗಿಡ್ಡೇನಹಳ್ಳಿ ಗ್ರಾಮದ ಬಿಕೆ ಕೊಳೆಗೇರಿಯಲ್ಲಿ 40 ಕುಟುಂಬ ಹಾಗೂ ರಾಜರಾಜೇಶ್ವರಿ ನಗರದ ಮಾತಾಪುರ ದಲಿತ ಕಾಲೊನಿಯಲ್ಲಿ ಕುಷ್ಠ ರೋಗದಿಂದ ಗುಣಮುಖರಾದ 50 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಜಮೀರ್ ಅಹಮದ್ ವಿತರಿಸಿದರು.</p>.<p>ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಶಾಸಕ ಎಸ್. ಟಿ ಸೋಮಶೇಖರ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ್, ಮುಖ್ಯ ಎಂಜಿನಿಯರ್ ಸುಧೀರ್, ತಾಂತ್ರಿಕ ಸಲಹೆಗಾರ ಬಾಲರಾಜ್ ಉಪಸ್ಥಿತರಿದ್ದರು.</p>.<p class="Subhead">ಶೆಡ್ನಲ್ಲಿ ಊಟ: ಯಶವಂತಪುರದ ಯಲಚಗುಪ್ಪೆ ಗ್ರಾಮದ ಮಾದಾರ ಚನ್ನಯ್ಯ ಕೊಳೆಗೇರಿಯಲ್ಲಿ ಮನೆ ಮಂಜೂರಾತಿ ಪತ್ರ ವಿತರಿಸಿದ ವಸತಿ ಸಚಿವ ಜಮೀರ್ ಅಹಮದ್ ಅವರು ಅಲೆಮಾರಿ ಸಮುದಾದಯ ಶರಣಯ್ಯ ಅವರ ಶೆಡ್ನಲ್ಲಿ ಊಟ ಮಾಡಿದರು.</p>.<p>ಶೆಡ್ನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆದಷ್ಟು ಶೀಘ್ರ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಸಚಿವರು ನಮ್ಮ ಶೆಡ್ನಲ್ಲಿ ಊಟ ಮಾಡಿದ್ದು ನಮ್ಮ ಭಾಗ್ಯ. ನಾವು ಪ್ರೀತಿಯಿಂದ ಮಾಡಿದ್ದ ಅಡುಗೆಯನ್ನೇ ಬಡಿಸುವಂತೆ ಕೇಳಿ, ಊಟ ಮಾಡಿದರು. ನಮಗೆ ತುಂಬಾ ಸಂತಸವಾಯಿತು’ ಎಂದು ಶರಣಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>