ರಾಮನಗರ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಕೇಂದ್ರವಾಗಿಟ್ಟುಕೊಂಡು ಈ ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸಲಿವೆ. ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ನಿರ್ದೇಶನದಂತೆ ಕೆಲಸ ಮಾಡಬೇಕು. ಗಸ್ತು ತಿರುಗುವುದು, ಆನೆಗಳ ಚಲನವಲನ ಗುರುತಿಸಿ, ಅವುಗಳನ್ನು ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸುವುದು, ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು ಈ ಕಾರ್ಯಪಡೆಯ ಪ್ರಮುಖ ಕಾರ್ಯಗಳಾಗಿವೆ.