<p><strong>ಬೆಂಗಳೂರು</strong>: ‘ಜಿಲ್ಲೆಗಳಿಂದ ಸರಿಯಾಗಿ ವರದಿ ಬರುತ್ತಿದ್ದರೆ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ 150 ಇನ್ಸ್ಪೆಕ್ಟರ್ ಹುದ್ದೆಗಳು ಭರ್ತಿಯಾಗುತ್ತಿದ್ದವು. ಜಿಲ್ಲಾಧಿಕಾರಿ ನೀಡಿದ ವರದಿಯಂತೆ ಕೇವಲ 84 ಹುದ್ದೆಗಳು ಭರ್ತಿ ಮಾಡಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಸಾರಿಗೆ ಇಲಾಖೆ ವತಿಯಿಂದ ಸಾರಿಗೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೋಟಾರು ವಾಹನ ನಿರೀಕ್ಷಕರಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎಲ್ಲರೂ ಒಂದು ರೂಪಾಯಿಯನ್ನು ಕೊಡದೇ ಆಯ್ಕೆಯಾಗಿದ್ದಾರೆ. ಆ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಇನ್ನು ಕನಿಷ್ಠ 35 ವರ್ಷ ದುಡಿಯಬಹುದು. ಸಹಾಯಕ ಆಯುಕ್ತ ಹುದ್ದೆವರೆಗೆ ತಲುಪುವ ಅವಕಾಶವಿದೆ. ಜನರಿಗೆ ತೊಂದರೆ ನೀಡದಂತೆ ಉತ್ತಮವಾಗಿ ಕೆಲಸ ಮಾಡಿ ಇಲಾಖೆಗೆ ಉತ್ತಮ ಹೆಸರು ತರಬೇಕು’ ಎಂದು ಸಲಹೆ ನೀಡಿದರು.</p>.<p>‘ಅತಿ ಹೆಚ್ಚು ಆದಾಯ ಸಂಗ್ರಹವಾಗುವ ಖಾತೆ ನಮ್ಮದು. ಪ್ರತಿ ವರ್ಷ ₹13 ಸಾವಿರ ಕೋಟಿ ಸಂಗ್ರಹವಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಸಾರಿಗೆ ಆಯುಕ್ತ ಯೋಗಿಶ್ ಎ.ಎಂ., ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜಿಲ್ಲೆಗಳಿಂದ ಸರಿಯಾಗಿ ವರದಿ ಬರುತ್ತಿದ್ದರೆ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ 150 ಇನ್ಸ್ಪೆಕ್ಟರ್ ಹುದ್ದೆಗಳು ಭರ್ತಿಯಾಗುತ್ತಿದ್ದವು. ಜಿಲ್ಲಾಧಿಕಾರಿ ನೀಡಿದ ವರದಿಯಂತೆ ಕೇವಲ 84 ಹುದ್ದೆಗಳು ಭರ್ತಿ ಮಾಡಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಸಾರಿಗೆ ಇಲಾಖೆ ವತಿಯಿಂದ ಸಾರಿಗೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೋಟಾರು ವಾಹನ ನಿರೀಕ್ಷಕರಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಎಲ್ಲರೂ ಒಂದು ರೂಪಾಯಿಯನ್ನು ಕೊಡದೇ ಆಯ್ಕೆಯಾಗಿದ್ದಾರೆ. ಆ ಮೂಲಕ ಸಂಪೂರ್ಣ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಇನ್ನು ಕನಿಷ್ಠ 35 ವರ್ಷ ದುಡಿಯಬಹುದು. ಸಹಾಯಕ ಆಯುಕ್ತ ಹುದ್ದೆವರೆಗೆ ತಲುಪುವ ಅವಕಾಶವಿದೆ. ಜನರಿಗೆ ತೊಂದರೆ ನೀಡದಂತೆ ಉತ್ತಮವಾಗಿ ಕೆಲಸ ಮಾಡಿ ಇಲಾಖೆಗೆ ಉತ್ತಮ ಹೆಸರು ತರಬೇಕು’ ಎಂದು ಸಲಹೆ ನೀಡಿದರು.</p>.<p>‘ಅತಿ ಹೆಚ್ಚು ಆದಾಯ ಸಂಗ್ರಹವಾಗುವ ಖಾತೆ ನಮ್ಮದು. ಪ್ರತಿ ವರ್ಷ ₹13 ಸಾವಿರ ಕೋಟಿ ಸಂಗ್ರಹವಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಸಾರಿಗೆ ಆಯುಕ್ತ ಯೋಗಿಶ್ ಎ.ಎಂ., ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>