<p><strong>ಬೆಂಗಳೂರು</strong>: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ ₹36 ಲಕ್ಷ ಪಡೆದುಕೊಂಡು ವಂಚಿಸಿರುವ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಬನಶಂಕರಿಯ ನಿವಾಸಿ ಮೋಹನ್ ರಾಜ್ ವಂಚನೆ ಆರೋಪ ಎದುರಿಸುತ್ತಿರುವ ವ್ಯಕ್ತಿ.</p>.<p>‘10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರುವರಿಯಲ್ಲಿ ಮಗು ಜನಿಸಿತ್ತು. ಕಳೆದ ವರ್ಷ ಆತ ಮನೆ ಬಿಟ್ಟು ಹೋಗಿದ್ದಾನೆ’ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.</p>.<p>‘ಹೊಸ ಮನೆ ಕಟ್ಟೋಣ ಎಂದು ಮೋಹನ್ ರಾಜ್ ನಂಬಿಸಿದ್ದ. ಆತನ ಮಾತು ನಂಬಿ ಚಿನ್ನಾಭರಣ ಅಡವಿಟ್ಟು ₹36 ಲಕ್ಷ ಸಾಲ ಪಡೆದು ಆತನಿಗೆ ನೀಡಿದ್ದೆ. ಆ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. </p>.<p>‘ನ್ಯಾಯ ಕೇಳಲು ಹೋದರೆ ನನ್ನ ಮೇಲೆ ಹಲ್ಲೆ ನಡೆಸಿದ್ದ. ನಾಲ್ಕು ಬಾರಿ ಪೊಲೀಸ್ ಠಾಣೆಗೆ ಹೋಗಿದ್ದರೂ ನ್ಯಾಯ ದೊರೆಯುತ್ತಿಲ್ಲ. ಮತ್ತೆ ದೂರು ನೀಡಿದರೆ ನನ್ನ ಮೇಲೆಯೇ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದರು’ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.</p>.<p>2021ರಲ್ಲಿ ಮೊದಲ ಪತಿಯಿಂದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ ₹36 ಲಕ್ಷ ಪಡೆದುಕೊಂಡು ವಂಚಿಸಿರುವ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಬನಶಂಕರಿಯ ನಿವಾಸಿ ಮೋಹನ್ ರಾಜ್ ವಂಚನೆ ಆರೋಪ ಎದುರಿಸುತ್ತಿರುವ ವ್ಯಕ್ತಿ.</p>.<p>‘10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರುವರಿಯಲ್ಲಿ ಮಗು ಜನಿಸಿತ್ತು. ಕಳೆದ ವರ್ಷ ಆತ ಮನೆ ಬಿಟ್ಟು ಹೋಗಿದ್ದಾನೆ’ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.</p>.<p>‘ಹೊಸ ಮನೆ ಕಟ್ಟೋಣ ಎಂದು ಮೋಹನ್ ರಾಜ್ ನಂಬಿಸಿದ್ದ. ಆತನ ಮಾತು ನಂಬಿ ಚಿನ್ನಾಭರಣ ಅಡವಿಟ್ಟು ₹36 ಲಕ್ಷ ಸಾಲ ಪಡೆದು ಆತನಿಗೆ ನೀಡಿದ್ದೆ. ಆ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. </p>.<p>‘ನ್ಯಾಯ ಕೇಳಲು ಹೋದರೆ ನನ್ನ ಮೇಲೆ ಹಲ್ಲೆ ನಡೆಸಿದ್ದ. ನಾಲ್ಕು ಬಾರಿ ಪೊಲೀಸ್ ಠಾಣೆಗೆ ಹೋಗಿದ್ದರೂ ನ್ಯಾಯ ದೊರೆಯುತ್ತಿಲ್ಲ. ಮತ್ತೆ ದೂರು ನೀಡಿದರೆ ನನ್ನ ಮೇಲೆಯೇ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದರು’ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.</p>.<p>2021ರಲ್ಲಿ ಮೊದಲ ಪತಿಯಿಂದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>